Hot News
- Quick Links
- ಸ್ಥಳೀಯ ಸುದ್ದಿ
ಸಮಾಜಮುಖಿ ಚಿಂತಕರು, ದಲಿತ ಮುಖಂಡರು ಹಾಗೂ ಅಂಕೋಲಾ ಪುರಸಭೆಯ ಮಾಜಿ ಸದಸ್ಯರಾದ ಅಶೋಕ್ ಶೇಡಗೇರಿ ಅವರು ನಿನ್ನೆ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಸದಾ ಸತ್ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದ ಇವರು, ಓರ್ವ ಆದರ್ಶ ರಾಜಕಾರಣಿ ಯಾಗಿದ್ದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕೆಂಬ ಮಹದಾಸೆ ಹೊಂದಿದ್ದ ಅವರು, ದಲಿತ ಹಾಗೂ ಶೋಷಿತ ವರ್ಗದ ಆಶಾಕಿರಣವಾಗಿ ಗುರುತಿಸಿಕೊಂಡಿದ್ದರು. ಪುರಸಭಾ ಸದಸ್ಯರಾಗಿದ್ದ ಅವಧಿಯಲ್ಲಿ ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಸಕರ ಅವಿರತ ಪ್ರಯತ್ನ ಹಾಗೂ ಸಂತಾಪ: ಅಶೋಕ ಶೇಡಗೇರಿ…
ಅಂಕೋಲಾ ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಆರಂಭವಾದ ಗಾಳಿ-ಮಳೆಯ ಆರ್ಭಟ ಈಗಲೂ ಬಿಡುವಿಲ್ಲದೆ ಮುಂದುವರೆದಿದ್ದು, ಜನಜೀವನ ತೀವ್ರವಾಗಿ ಬಾಧಿತಗೊಂಡಿದೆ. ನಿರಂತರವಾಗಿ ಬೀಸುತ್ತಿರುವ ಗಾಳಿ ಹಾಗೂ ಧಾರಾಕಾರ ಮಳೆಯಿಂದಾಗಿ ತಾಲೂಕಿನ ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದು, ಅನೇಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಪ್ರಕೃತಿಯ ಈ ನಿರಂತರ ಮುನಿಸಿನಿಂದ ವಿದ್ಯುತ್ ಸಂಪರ್ಕಕ್ಕೆ ತೀವ್ರ ಅಡ್ಡಿಯಾಗಿದ್ದರೂ, ಈ ವಿಪತ್ತಿನ ಸಮಯದಲ್ಲಿ ಹೆಸ್ಕಾಂ ಅಧಿಕಾರಿಗಳು ಹಾಗೂ ಲೈನ್ಮನ್ಗಳು ತೋರುತ್ತಿರುವ ಕರ್ತವ್ಯನಿಷ್ಠೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸವಾಲಿನ ನಡುವೆಯೂ ಅವಿರತ ಶ್ರಮ: ಮಳೆಗಾಳಿ ಈಗಲೂ ಮುಂದುವರೆದಿದ್ದರೂ, ಹವಾಮಾನದ ವೈಪರೀತ್ಯವನ್ನು ಲೆಕ್ಕಿಸದೆ…
ಹೊನ್ನಾವರ ತಾಲೂಕಿನ ಕರ್ವಾ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಂಗತ ಗೋಪಾಲ್ ನಾಯ್ಕ್ ಅವರ ಅಕಾಲಿಕ ನಿಧನವು ಪಂಚಾಯತ್ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ನೋವು ಕುಟುಂಬದವರಿಗೆ ಮಾತ್ರವಲ್ಲದೆ, ಅವರೊಂದಿಗೆ ಕೆಲಸ ಮಾಡಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೂ ತೀವ್ರ ದುಃಖವನ್ನುಂಟು ಮಾಡಿದ್ದ ಈ ಹಿನ್ನೆಲೆಯಲ್ಲಿ ದಿವಂಗತ ಗೋಪಾಲ್ ನಾಯ್ಕ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಮತ್ತು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಇಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗ್ರಾಮ ಪಂಚಾಯತಿ…
ಅಂಕೋಲಾ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಆಸ್ತಿಪಾಸ್ತಿಗಳಿಗೆ ಹಾನಿಯಾದ ಘಟನೆಗಳು ವರದಿಯಾಗುತ್ತಿವೆ. ತಾಲೂಕಿನ ಶೇಡಗೇರಿ ಗ್ರಾಮದ ಹುಲಿದೇವರವಾಡದಲ್ಲಿ ವರುಣನ ಆರ್ಭಟಕ್ಕೆ ಮನೆಯೊಂದರ ಚಾವಣಿ ಹಾಗೂ ಗೋಡೆಗಳಿಗೆ ಹಾನಿಯಾಗಿದೆ. ಹುಲಿದೇವರವಾಡ-ಶೇಡಗೇರಿ ನಿವಾಸಿ ತಾಹಿರಾಬಿ ಅಬ್ದುಲ್ ಮುನಾಪ ಶೇಖ್ (ಮನೆ ನಂಬರ್: 921/A) ಅವರ ಮನೆಗೆ ಜುಲೈ 5ರಂದು ಸುರಿದ ವಿಪರೀತ ಗಾಳಿ - ಮಳೆಯ ಪರಿಣಾಮವಾಗಿ ಈ ಹಾನಿ ಸಂಭವಿಸಿದೆ. ಗಾಳಿ ಮಳೆಯ ರಭಸಕ್ಕೆ ಮನೆಯ ಮಾಡು (ಮೇಲ್ಛಾವಣಿ) ಹಾನಿಗೀಡಾಗಿದ್ದು, ಗೋಡೆಗಳು ಬಿರುಕುಬಿಟ್ಟಿವೆ. ಇದರಿಂದಾಗಿ ಮನೆಯಲ್ಲಿ ವಾಸಿಸುವ ಪರಿಸ್ಥಿತಿ ದುಸ್ತರವಾಗಿದ್ದು,…
ಅಂಕೋಲಾ (ಉತ್ತರ ಕನ್ನಡ): ತಾಲೂಕಿನ ಅವರ್ಸಾ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಖಾಸಗಿ ಬಸ್ಸೊಂದು ದಿಢೀರ್ ನಿಯಂತ್ರಣ ತಪ್ಪಿ ರಸ್ತೆಬದಿಗೆ ಮಗುಚಿಬಿದ್ದ ಪರಿಣಾಮ, ವಾಹನದಲ್ಲಿದ್ದ ಪ್ರಯಾಣಿಕರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೆಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದ 'ಸೀಬರ್ಡ್' ಟ್ರಾವೆಲ್ಸ್ಗೆ ಸೇರಿದ ವಾಹನ ಇದಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸ್ ತನಿಖೆ ನಡೆಯುತ್ತದೆ. ಲಭ್ಯವಾದ ಪ್ರಾಥಮಿಕ ಮಾಹಿತಿಗಳ ಪ್ರಕಾರ, ಘಟನಾ ಸಮಯದಲ್ಲಿ ಬಸ್ಸಿನಲ್ಲಿ ಹೆಚ್ಚಿನ ಜನದಟ್ಟಣೆ ಇರಲಿಲ್ಲ. ಒಂದು ವೇಳೆ ಬಸ್ ಭರ್ತಿಯಾಗಿದ್ದಿದ್ದರೆ ಭಾರಿ ಅನಾಹುತವೇ ಸಂಭವಿಸುವ ಸಾಧ್ಯತೆಯಿತ್ತು ಎಂದು ಪ್ರತ್ಯಕ್ಷದರ್ಶಿಗಳು ವಿಶ್ಲೇಷಿಸಿದ್ದಾರೆ. ಆದಾಗ್ಯೂ,…
ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮ ಪಂಚಾಯತ್ ಸಮೀಪ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಅಂಕೋಲಾ ಕಡೆಯಿಂದ ಕುಮಟಾ ದಿಕ್ಕಿನತ್ತ ವೇಗವಾಗಿ ಚಲಿಸುತ್ತಿದ್ದ ಕಾರು, ಮಾರ್ಗಮಧ್ಯೆ ಕತ್ತಲೆಯಲ್ಲಿ ದಿಢೀರ್ ನಿಯಂತ್ರಣ ಕಳೆದುಕೊಂಡು ಈ ಅವಘಡಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ವಾಹನದ ಮುಂಭಾಗ ಜಖಂಗೊಂಡಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದೆ ಎನ್ನುವು ಮಾಹಿತಿ ಇದೆ. ರಾತ್ರಿಯ ಕಾರ್ಗತ್ತಲು, ರಸ್ತೆಯ ತಿರುವು, ಅತಿ ವೇಗ ಅಥವಾ ಚಾಲಕನಿಗೆ ಆವರಿಸಿದ ನಿದ್ರೆಯ…
ಅಂಕೋಲಾ ತಾಲೂಕಿನ ರೈತರಿಗೆ 2026ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಮರುರಚಿಸಲಾದ ಬೆಳೆವಿಮೆ ಯೋಜನೆಯಡಿ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ನಿಗದಿತ ದಿನಾಂಕದೊಳಗೆ ರೈತರು ಈ ವಿಮಾ ಯೋಜನೆಗೆ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಇಲಾಖೆಯು ಪ್ರಕಟಣೆಯಲ್ಲಿ ಕೋರಿದೆ. ಈ ಯೋಜನೆಯಡಿ ವಿವಿಧ ತೋಟಗಾರಿಕಾ ಬೆಳೆಗಳಿಗೆ ಪ್ರತಿ ಎಕ್ಕರೆಗೆ ವಿಮಾ ಮೊತ್ತ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತನ್ನು ನಿಗದಿಪಡಿಸಲಾಗಿದೆ. ಅಡಿಕೆ ಬೆಳೆಗೆ ಪ್ರತಿ ಎಕರೆಗೆ 51,200 ರೂ. ವಿಮಾ ಮೊತ್ತ ನಿಗದಿಪಡಿಸಿದ್ದು, ರೈತರು 2,560…
ಸಮಾಜದಲ್ಲಿ ಜೀವ ರಕ್ಷಕರಾಗಿ ಹಗಲಿರುಳು ಶ್ರಮಿಸುವ ವೈದ್ಯರ ಸೇವೆ ಅನನ್ಯವಾದದ್ದು. "ವೈದ್ಯೋ ನಾರಾಯಣೋ ಹರಿ" ಎಂಬ ಉಕ್ತಿಯಂತೆ ದೇವರ ಸ್ವರೂಪರಾಗಿರುವ ವೈದ್ಯರನ್ನು ಸ್ಮರಿಸುವ ಮತ್ತು ಅವರ ಸೇವೆಗೆ ಕೃತಜ್ಞತೆ ಸಲ್ಲಿಸುವ 'ವೈದ್ಯರ ದಿನಾಚರಣೆ'ಯ ಅಂಗವಾಗಿ, ಅಂಕೋಲಾ ತಾಲೂಕು ವೈದ್ಯಾಧಿಕಾರಿಗಳಾದ ಶ್ರೀ ಜಗದೀಶ ನಾಯಕ ಅವರನ್ನು ವಕೀಲರ ಬಳಗದ ವತಿಯಿಂದ ಅತ್ಯಂತ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಮಾಜದ ಸ್ವಾಸ್ಥ್ಯ ಕಾಪಾಡುವ ವೈದ್ಯಕೀಯ ಕ್ಷೇತ್ರ ಹಾಗೂ ಜನರಿಗೆ ನ್ಯಾಯ ದೊರಕಿಸಿಕೊಡುವ ಕಾನೂನು ವಲಯದ ನಡುವಿನ ಪರಸ್ಪರ ಗೌರವ ಮತ್ತು ಬಾಂಧವ್ಯಕ್ಕೆ ಈ ಸರಳ ಹಾಗೂ ಅರ್ಥಪೂರ್ಣ ಸಮಾರಂಭ…
ಪ್ರಕೃತಿಯ ಮುನಿಸಿಗೆ ಎಂತಹ ಬಲಿಷ್ಠ ಜೀವವೂ ತಲೆಬಾಗಲೇಬೇಕು ಎಂಬುದಕ್ಕೆ ಅಂಕೋಲಾ ತಾಲೂಕಿನ ಪುರಲಕ್ಕಿ ಬೇಣದ ಆನಂದಗಿರಿ ಸಾಕ್ಷಿಯಾಗಿದೆ. ಭಾರಿ ಮಳೆ ಮತ್ತು ಬಿರುಗಾಳಿಯ ಅಬ್ಬರಕ್ಕೆ ದಶಕಗಳಿಂದ ಫಲ ನೀಡುತ್ತಾ ಬಂದಿದ್ದ ಬೃಹತ್ ತೆಂಗಿನ ಮರವೊಂದು ಮನೆಯ ಮೇಲೆ ಉರುಳಿದೆ. ಈ ಘಟನೆಯ ನಡುವೆಯೂ ಮನೆಯೊಳಗಿದ್ದ ಕಂದಮ್ಮನೊಂದು ಪವಾಡಸದೃಶ ರೀತಿಯಲ್ಲಿ ಪಾರಾಗಿದೆ. ಪುರಲಕ್ಕಿ ಬೇಣದ ದಿವಂಗತ ಡೋಲು ನಾಯ್ಕ ರವರ ಜಾಗದಲ್ಲಿ ಹೆಮ್ಮರಾವಾಗಿ ಬೆಳೆದು ನಿಂತಿದ್ದ ತೆಂಗಿನ ಮರವು, ಗಾಳಿಯ ರಭಸಕ್ಕೆ ತಾಳಲಾರದೆ ಪಕ್ಕದಲ್ಲೇ ಇದ್ದ ವಿನಾಯಕ ಆಚಾರಿ ಅವರ ಮನೆಯ ಛಾವಣಿಯ ಮೇಲೆ ದಿಢೀರನೆ…
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪ್ರೇಯಸಿಗೆ ಚಾಕು ಇರಿದು ಬಳಿಕ ಕಾರು ಸ್ಫೋಟಗೊಂಡು ಪ್ರಿಯಕರ ಸಜೀವ ದಹನವಾಗಿದ್ದಾನೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಬ್ಬುಲು ಗ್ರಾಮದ ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಯುವತಿ ರಮ್ಯಾ ಸದ್ಯ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ನಾಗೇಂದ್ರ ಹಾಗೂ ರಮ್ಯಾ ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ರಮ್ಯಾ ಅವರು ಬೆಂಗಳೂರಿನಲ್ಲಿ ನೆಲೆಸಿದ್ದು, ಅಲ್ಲಿನ ಸಂಜಯ್…
ಅಂಕೋಲಾ: ಅಂಕೋಲಾ ತಾಲೂಕಿನ ಕೇಣಿಯ ಗಾಬೀತವಾಡದಲ್ಲಿ 67 ವರ್ಷದ ವೃದ್ಧೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು…
ಅಂಕೋಲಾ: ತಾಲೂಕಿನ ಕೇಣಿ ಗ್ರಾಮದ ಗಾಬೀತವಾಡದ ಯುವತಿಯೊಬ್ಬಳು ಮನೆಯಿಂದ ಯಾರಿಗೂ ಏನನ್ನೂ ಹೇಳದೆ ಹೊರಟು, ದಿಢೀರ್…
ಅಂಕೋಲಾ: ತಾಲೂಕಿನ ಕುಂಟಕಣಿ ಗ್ರಾಮದ ಅಸಳ್ಳಿ ಮೂಲದ 18 ವರ್ಷದ ಯುವತಿ ಯೋರ್ವಳು ತಾಯಿಗೆ ಔಷಧಿ…
ಕುಮಟಾ/ ಮಿರ್ಜಾನ್: ತಾವು ಕಲಿತ ಮಾತೃಶಾಲೆಯ ಬಗ್ಗೆ ಹೆಮ್ಮೆ ಹಾಗೂ ಅಭಿಮಾನವನ್ನು ಉಳಿಸಿಕೊಂಡಿರುವ ಹಿರಿಯ ವಿದ್ಯಾರ್ಥಿಗಳು,…
ಕಾರವಾರ/ಅಂಕೋಲಾ: ಕಾರವಾರ ಜಿಲ್ಲಾ ನ್ಯಾಯಾಲಯ ಸೇರಿದಂತೆ ಕರಾವಳಿ ಭಾಗದ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಅಂಕೋಲಾ: ಸಾರ್ವಜನಿಕರ ಜೀವ ರಕ್ಷಣೆಗಾಗಿ 'ವಿಕಾಸ ವಾಹಿನಿ' ಮಾಡಿದ ಎಚ್ಚರಿಕೆಯ ವರದಿಗೆ ಪ್ರತಿಫಲ ಸಿಕ್ಕಿದೆ. ಅಂಕೋಲಾ…
ಅಂಕೋಲಾ: ರಕ್ತ ಪರೀಕ್ಷೆಗಾಗಿ ಮಗನ ಜೊತೆ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೃದ್ಧೆಯೊಬ್ಬರು ಆಟೋ ರಿಕ್ಷಾ…
ಪ್ರಸ್ತಾವಿತ ಮಂಗಳೂರು ಸಂಚಾರಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸುವ ರಾಜ್ಯ ಸರ್ಕಾರದ…
ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮಯ ಉಳಿಸುವ ಭರದಲ್ಲಿ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿರುವ…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Neque porro quisquam est, qui dolorem ipsum quia dolor sit amet, consectetur, adipisci velit, sed quia non numquam.
Sign in to your account