ಭಕ್ತಿಗೂ ಬಿಡದ ಸೈಬರ್ ಖದೀಮರು: ಮಾರಿಕಾಂಬಾ ದೇವಿಯ ಹೆಸರಲ್ಲಿ ಹಣ ದೋಚಲು ಬಂದ ‘ಯಜಮಾನ’ನ ಬಣ್ಣ ಬಯಲು!.

ನಾಡಿನ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಯ ಸಂಭ್ರಮದ ನಡುವೆಯೇ, ಭಕ್ತರ ಭಕ್ತಿ ಹಾಗೂ ನಂಬಿಕೆಯನ್ನು ಬಂಡವಾಳ ವಾಗಿಸಿಕೊಂಡು ವಂಚಿಸಲು ಸೈಬರ್ ಖದೀಮರು ಹೊಸ ತಂತ್ರ ರೂಪಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಸೃಷ್ಟಿಸಿರುವ ವಂಚಕರು, ಆನ್‌ಲೈನ್ ಮೂಲಕ ದೇವಿಯ 'ಉಡಿ ತುಂಬುವ ಸೇವೆ' ಮಾಡಿಸುವುದಾಗಿ ನಂಬಿಸಿ ಹಣ ದೋಚಲು ಯತ್ನಿಸಿದ್ದು, ಈ ಬಗ್ಗೆ ಶಿರಸಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ವಂಚನೆ ಜಾಲ? ಸಾಮಾಜಿಕ ಜಾಲತಾಣಗಳಲ್ಲಿ "Yajmaan" (ಯಜಮಾನ) ಎಂಬ ಖಾತೆಯಿಂದ ಈ ನಕಲಿ ವಿಡಿಯೋ…

News Desk

ಕಸಿದುಕೊಂಡ ಕೆಲಸ, ಅಡವಿಟ್ಟ ಒಡವೆ: ನಯನಾಳ ಸಾವಿಗೆ ಕಾರಣವಾಯ್ತಾ ಕೌಟುಂಬಿಕ ದೌರ್ಜನ್ಯ?

ಅಂಕೋಲಾ: ಹದಿಮೂರು ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ವಿವಾಹಿತೆಯೊಬ್ಬಳು ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳ ತಾಳಲಾರದೆ ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಅಂಕೋಲಾ ತಾಲೂಕಿನ ಹೊಸೂರು ಗ್ರಾಮದಲ್ಲಿ ಪ್ರಕರಣವೊಂದು ದಾಖಲಾಗಿದೆ. 'ನೀನು ಬದುಕಿ ಏನು ಪ್ರಯೋಜನ, ಸತ್ತರೆ ಒಳ್ಳೆಯದು' ಎಂದು ಗಂಡನ ಮನೆಯವರು ನಿಂದಿಸಿದ್ದು, ಇದೇ ಮಾತುಗಳು ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿವೆ ಎಂದು ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ಮಹಿಳೆಯನ್ನು ಹೊಸೂರಿನ ರಾಮಚಂದ್ರ @ ಕೃಷ್ಣ ಪ್ರಭು ಎಂಬಾತನ ಪತ್ನಿ ನಯನಾ (35) ಎಂದು ಗುರುತಿಸಲಾಗಿದೆ. ಆಕೆಯ ಸಾವಿಗೆ…

News Desk

ಮನೆಯ ಮಾಡು ಒಡೆದು ಒಳನುಗ್ಗಿ ಕೃತ್ಯ: ಹಣಕ್ಕಾಗಿ ವೃದ್ಧೆಯನ್ನು ಕೊಂದಾತನಿಗೆ ಕಾನೂನಿನಡಿ ಕಠಿಣ ಶಿಕ್ಷೆ..

ಹಣ ಹಾಗೂ ಒಡವೆಗಳಿಗಾಗಿ ವೃದ್ಧೆಯೊಬ್ಬರ ಮನೆಯ ಮಾಡು ಒಡೆದು ಒಳನುಗ್ಗಿ, ಕತ್ತು ಹಿಸುಕಿ ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗೆ ಕಾರವಾರ ಪೀಠಾಸೀನ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೆಳಗಿನಕೇರಿ ನಿವಾಸಿ, ಕೂಲಿ ಕಾರ್ಮಿಕ ಅಭಿಜಿತ ಗಣಪತಿ ಮಡಿವಾಳ (30) ಶಿಕ್ಷೆಗೊಳಗಾದ ಆರೋಪಿ. ಘಟನೆಯ ಹಿನ್ನೆಲೆ: 2024ರ ಡಿಸೆಂಬರ್ 23ರಂದು ರಾತ್ರಿ 10:15ರ ಸುಮಾರಿಗೆ ಸಿದ್ದಾಪುರ ಪಟ್ಟಣದ ಬಸವನಗಲ್ಲಿಯ ನಿವಾಸಿ ಗೀತಾ ಪ್ರಭಾಕರ ಹುಂಡೇಕರ…

News Desk

ಮಿರ್ಜಾನ ಕೋಟೆ ರಸ್ತೆಗೆ ಗೇಟ್ ಅಳವಡಿಕೆ ನಿರ್ಧಾರ ಕೈಬಿಟ್ಟ ಪಂಚಾಯತ್ – ಗ್ರಾಮಸ್ಥರಿಗೆ ಲಿಖಿತ ಭರವಸೆ..

ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆ ರಸ್ತೆಯಲ್ಲಿ (ಛತ್ರಕೂರ್ವೆ ಗ್ರಾಮಕ್ಕೆ ತೆರಳುವ ಮಾರ್ಗ) ಅಕ್ರಮವಾಗಿ ಗೇಟ್ ಅಳವಡಿಸುವ ಪಂಚಾಯತ್ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಎಚ್ಚೆತ್ತ ಪಂಚಾಯತ್ ಆಡಳಿತವು ಗೇಟ್ ನಿರ್ಮಾಣ ನಿರ್ಧಾರವನ್ನು ಕೈಬಿಟ್ಟಿದೆ. ಈ ಕುರಿತು ಗ್ರಾಮಸ್ಥರಿಗೆ ಅಧಿಕೃತವಾಗಿ 'ಹಿಂಬರಹ' ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದೆ. ಮಿರ್ಜಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಯಲ್ಲಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡುವ ಉದ್ದೇಶದಿಂದ ಗೇಟ್ ಅಳವಡಿಸಲು ಪಂಚಾಯತ್ ಮುಂದಾಗಿತ್ತು. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಯ ಎಚ್ಚರಿಕೆ…

News Desk

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಭೀಕರ ಸರಣಿ ಅಪಘಾತ – ಐದಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..

ಅಂಕೋಲಾ: ತಾಲೂಕಿನ ಸುಂಕಸಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಮುಂಜಾನೆ ಹೊತ್ತಿಗೆ ಎರಡು ಖಾಸಗಿ ಬಸ್‌ಗಳು ಹಾಗೂ ಒಂದು ಲಾರಿ ನಡುವೆ ಭೀಕರ ಸರಣಿ ಡಿಕ್ಕಿ ಸಂಭವಿಸಿದ್ದು, ಐದಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಹಿನ್ನೆಲೆ: ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಹುಬ್ಬಳ್ಳಿಯಿಂದ ಮಂಗಳೂರಿನತ್ತ ಮುಖಮಾಡಿದ್ದ ಗಣೇಶ್ ಟ್ರಾವೆಲ್ಸ್ ಬಸ್ ಮತ್ತು ಅಂಕೋಲಾದಿಂದ ಯಲ್ಲಾಪುರದ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಈ ದುರಂತ ಸಂಭವಿಸಿದೆ. ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ವಾಹನಗಳ ನಿಯಂತ್ರಣ ತಪ್ಪಿ ಮೂರೂ ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿವೆ ಎಂದು ಪ್ರಾಥಮಿಕ…

News Desk

ನಡುರಾತ್ರಿ ಮನೆಯವರು ನಿದ್ರಿಸುತ್ತಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳ… 24 ಗಂಟೆಯೊಳಗೆ ಪೊಲೀಸರ ಬಲೆಗೆ!!

ಕುಮಟಾ: ಪಟ್ಟಣದ ಬಸ್ತಿಪೇಟೆ ಬಳಿ ಮನೆಯೊಂದರಲ್ಲಿ ಜನರು ನಿದ್ರಿಸುತ್ತಿದ್ದ ವೇಳೆ ನುಗ್ಗಿ ಸಾವಿರಾರು ರೂಪಾಯಿ ನಗದು ದೋಚಿದ್ದ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 15-02-2026 ರ ರಾತ್ರಿ ನಡೆದ ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರು ದಾಖಲಾದ ಕೇವಲ 10 ಗಂಟೆಗಳಲ್ಲಿ ಮತ್ತು ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಘಟನೆಯ ವಿವರ: ದಿನಾಂಕ 15 ರ ರಾತ್ರಿ 10:30 ರಿಂದ…

News Desk

ಮನವಿ ಸಲ್ಲಿಸಿದ ತಕ್ಷಣ ಸ್ಪಂದನೆ: ಮಂಡ್ಲಿಕೊಪ್ಪ ಬಸ್ ನಿಲ್ದಾಣಕ್ಕೆ 3.5 ಲಕ್ಷ ರೂ. ಅನುದಾನ ಘೋಷಿಸಿದ ಶಾಸಕ ಭೀಮಣ್ಣ ನಾಯ್ಕ್..

ಸಿದ್ದಾಪುರ: ತಾಲೂಕಿನ ಮಂಡ್ಲಿಕೊಪ್ಪ ಗ್ರಾಮದಲ್ಲಿ ಬಸ್ ನಿಲ್ದಾಣದ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ರಣಧೀರ ವೇದಿಕೆ ಹಾಗೂ ಗ್ರಾಮಸ್ಥರು ಸಲ್ಲಿಸಿದ ಮನವಿಗೆ ಶಿರಸಿ-ಸಿದ್ದಾಪುರ ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ್ ಅವರು ಸ್ಥಳದಲ್ಲೇ ಸ್ಪಂದಿಸಿದ್ದು, ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ತಕ್ಷಣವೇ 3.5 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿದ್ದಾರೆ. ಸಮಸ್ಯೆಯ ಹಿನ್ನೆಲೆ: ಮಂಡ್ಲಿಕೊಪ್ಪ ಗ್ರಾಮದಲ್ಲಿದ್ದ ಹಳೆಯ ಬಸ್ ನಿಲ್ದಾಣವು ಕಳೆದ 3-4 ವರ್ಷಗಳ ಹಿಂದೆಯೇ ಶಿಥಿಲಗೊಂಡು ಬಿದ್ದಿತ್ತು. ಇದರಿಂದಾಗಿ ಗ್ರಾಮದ ಸುಮಾರು 30ರಿಂದ 40 ವಿದ್ಯಾರ್ಥಿಗಳು ದಿನನಿತ್ಯ ಶಾಲೆ-ಕಾಲೇಜುಗಳಿಗೆ ತೆರಳಲು ಹಾಗೂ ಗ್ರಾಮಸ್ಥರು ಕೆಲಸ…

News Desk

ಉತ್ತರ ಕನ್ನಡದಲ್ಲಿ ಬಿಸಿಲಿನ ತಾಪ ಏರಿಕೆಗೆ ಮುಂದಿನ 2 ದಿನ ಎಚ್ಚರಿಕೆ ವಹಿಸಲು ಸೂಚನೆ..

ಉತ್ತರ ಕನ್ನಡ : ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ (ಫೆ. 14 ಮತ್ತು 15) ಬಿಸಿಲಿನ ತಾಪಮಾನ ವಾಡಿಕೆಗಿಂತ ಹೆಚ್ಚಾಗಲಿದ್ದು, ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸುವಂತೆ ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಹೊರಡಿಸಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ, ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶವು 37.8 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪುವ ಸಾಧ್ಯತೆಯಿದೆ. ಪ್ರಸ್ತುತ ಇರುವ ಉಷ್ಣತೆಗಿಂತ ಸುಮಾರು 3 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ…

News Desk

ಅಂಕೋಲಾ: ರಾತ್ರಿ ಗದ್ದೆಗೆ ತೆರಳಿದ್ದ ರೈತ “ವಾಸುದೇವ ಗೌಡ” ಬಾವಿಗೆ ಬಿದ್ದು ಸಾವು; ದಿಕ್ಕಿಲ್ಲದಂತಾದ ಬಡ ಕುಟುಂಬ..

ಅಂಕೋಲಾ: ಬೆಳೆದು ನಿಂತ ಶೇಂಗಾ ಪೈರಿಗೆ ನೀರುಣಿಸಲು ರಾತ್ರಿ ವೇಳೆ ಗದ್ದೆಗೆ ತೆರಳಿದ್ದ ರೈತ ವಾಸುದೇವ ಗೌಡ (42) ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ವಂದಿಗೆ ಗ್ರಾ.ಪಂ. ವ್ಯಾಪ್ತಿಯ ಬೋಳೆ ಹೊಸಗದ್ದೆಯಲ್ಲಿ ನಡೆದಿದೆ. ಘಟನೆ ಹಿನ್ನೆಲೆ: ಫೆ.11ರ ರಾತ್ರಿ 9 ಗಂಟೆ ಸುಮಾರಿಗೆ ವಾಸುದೇವ ಅವರು ಗದ್ದೆಗೆ ನೀರು ಹಾಯಿಸಲು ವಿದ್ಯುತ್ ಪಂಪ್‌ಸೆಟ್ ಚಾಲನೆ ಮಾಡಲು ತೆರಳಿದ್ದರು. ಈ ವೇಳೆ ಕತ್ತಲೆಯಲ್ಲಿ ಕಾಲು ಜಾರಿ ಅಥವಾ ವಿದ್ಯುತ್ ಅವಘಡದಿಂದ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಮನೆಗೆ ಬಾರದೇ ಇದ್ದಾಗ ಹುಡುಕಾಡಿದ…

News Desk

ಮಿರ್ಜಾನ ಕೋಟೆ ರಸ್ತೆಗೆ ಅಡ್ಡಲಾಗಿ ‘ಗೇಟ್’ ನಿರ್ಮಾಣ: ಸಂಚಾರಕ್ಕೆ ಅಡ್ಡಿ; ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ..

ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆ ಹಾಗೂ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪಿ.ಡಬ್ಲ್ಯೂ.ಡಿ ರಸ್ತೆಯಲ್ಲಿ, ಗ್ರಾಮ ಪಂಚಾಯತ್ ವತಿಯಿಂದ ‘ಗೇಟ್’ ಅಳವಡಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಈ ರಸ್ತೆ ಛತ್ರಕೂರ್ವೆ ಗ್ರಾಮದ ಜೀವನಾಡಿಯಾಗಿದೆ. ಇಲ್ಲಿ ಗೇಟ್ ಹಾಕಿದರೆ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ತುರ್ತು ವಾಹನಗಳ ಮುಕ್ತ ಸಂಚಾರಕ್ಕೆ ಅಡಚಣೆಯಾಗುತ್ತದೆ," ಎಂದು ಆರೋಪಿಸಿ ಗ್ರಾಮದ 50ಕ್ಕೂ ಹೆಚ್ಚು ಮಂದಿ ಪಿಡಿಒಗೆ ಮನವಿ ಸಲ್ಲಿಸಿದರು. ಗ್ರಾಮದ ಮುಖಂಡ ವಿನಾಯಕ ಪಟಗಾರ ಮಾತನಾಡಿ, "ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿ ಗೇಟ್ ಅಳವಡಿಸುವುದು ಸರಿಯಲ್ಲ, ಕೂಡಲೇ…

News Desk
- Sponsored -
Ad imageAd image

Editor's Pick

Weather
23°C
Karnataka
overcast clouds
23° _ 23°
65%
2 km/h
Wed
33 °C
Thu
33 °C
Fri
33 °C
Sat
33 °C
Sun
23 °C

Follow US

Most Read

Discover Categories

ಕುಮಟಾದ ಪೆಟ್ರೋಲ್ ಬಂಕ್ ಕಳ್ಳತನ : ಹಣ ದೋಚಿದ್ದ ಇಬ್ಬರು ಆರೋಪಿಗಳು ಅಂದರ್..

ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್ ಒಂದರ ಕಚೇರಿಯ ಕಿಟಕಿ ಸರಳು ಕತ್ತರಿಸಿ,…

News Desk

ಅಲಗೇರಿ: ಶೋಭಾಯಾತ್ರೆ, ಧಾರ್ಮಿಕ ಚಿಂತನ; ಶ್ರೀ ಸಣ್ಣಮ್ಮ ದೇವಸ್ಥಾನದ ಆವರಣದಲ್ಲಿ ಜರುಗಿದ ಬ್ರಹತ್ ಹಿಂದೂ ಸಮ್ಮೇಳನ..

ಅಂಕೋಲಾ (ಅಲಗೇರಿ): ಸಿದ್ದಾಪುರದ ಶ್ರೀ ಮನ್ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ…

News Desk

ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರು ಇನ್ನಿಲ್ಲ..

ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಾಲಿಂಗ್ ಕುನ್ನೂರು (33) ಅವರು ಅನಾರೋಗ್ಯದಿಂದ…

News Desk

ಅಂಕೋಲಾ: ಅದ್ದೂರಿಯಾಗಿ ಜರುಗಿದ ‘ಕರಾವಳಿ ಕನ್ನಡ ಹಬ್ಬ-2026’; ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಲರವ..

ಅಂಕೋಲಾ: ಅಂಕೋಲಾ ಪಟ್ಟಣದ ಹೃದಯಭಾಗದಲ್ಲಿರುವ ಜೈಹಿಂದ್ ಮೈದಾನದಲ್ಲಿ ನಿನ್ನೆ ಫೆಬ್ರವರಿ 1ರಂದು ಕನ್ನಡದ ಕಂಪು ಹರಡಿತು.…

News Desk

ಗಂಗಾವಳಿ ಸೇತುವೆಯ ಅವೈಜ್ಞಾನಿಕ ತಿರುವಿನಲ್ಲಿ ದಿಢೀರ್ ಎದುರಾಗುವ ಬ್ಯಾರಿಕೇಡ್; ತಿರುವಿನ ಎರಡೂ ತುದಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಅಗತ್ಯ..

ಅಂಕೋಲಾ: ಮಂಜುಗುಣಿಯಿಂದ ಗಂಗಾವಳಿ ಕಡೆಗೆ ಸಂಪರ್ಕಿಸುವ ಗಂಗಾವಳಿ ಸೇತುವೆಯ ಸಂಪರ್ಕವಿರುವ ರಸ್ತೆ ತಿರುವು ವಾಹನ ಸಂಚಾರಕ್ಕೆ…

News Desk

ಅಂಕೋಲಾದಲ್ಲಿ ಫೆ.1ರಂದು ವಿಜೃಂಭಣೆಯ ‘ಕರಾವಳಿ ಕನ್ನಡ ಹಬ್ಬ’: ಕಲೆ, ಸಾಹಿತ್ಯ, ಸಂಗೀತದ ಸಂಗಮ..

ಅಂಕೋಲಾ: ಕನ್ನಡ ನಾಡು-ನುಡಿಯ ಕಂಪನ್ನು ಪಸರಿಸುವ ಮತ್ತು ಸ್ಥಳೀಯ ಕಲಾ ವೈಭವವನ್ನು ಅನಾವರಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಕರ್ನಾಟಕ…

News Desk

ವಿಭೂತಿ ಜಲಪಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗ; ರಕ್ಷಣಾ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ..

ಅಂಕೋಲಾ: ತಾಲೂಕಿನ ಗಡಿಭಾಗದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತದಲ್ಲಿ ಸೋಮವಾರ ಮೋಜಿಗೆಂದು ಬಂದಿದ್ದ ಪ್ರವಾಸಿಗನೊಬ್ಬರು ನೀರಿನ ಆಳಕ್ಕೆ…

News Desk

ಜನಪರ ಆಡಳಿತಕ್ಕೆ ಬ್ರೇಕ್: ಅಂಕೋಲಾ ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ವರ್ಗಾವಣೆ..

ಅಂಕೋಲಾ (ಜ24): ವೃತ್ತಿಯಿಂದ ವೈದ್ಯರಾಗಿದ್ದು, ನಂತರ ಕೆಎಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದು ಆಡಳಿತ…

News Desk