Hot News
- Quick Links
- ಸ್ಥಳೀಯ ಸುದ್ದಿ
ಅಂಕೋಲಾ: ತಾಲೂಕಿನ ಹೊಸಕಂಬಿ ವಲಯದ ಅರಣ್ಯ ಪ್ರದೇಶದಲ್ಲಿ ಹುಲಿ ಗಣತಿಗಾಗಿ ಅರಣ್ಯ ಇಲಾಖೆ ಅಳವಡಿಸಿದ್ದ ಬೆಲೆಬಾಳುವ ಕ್ಯಾಮೆರಾಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಅಂಕೋಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕಳುವಾಗಿದ್ದ ಕ್ಯಾಮೆರಾಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂಕೋಲಾ ತಾಲೂಕಿನ ಹಿಲ್ಲೂರು ಸಮೀಪದ ಕೋಳಗಿ ನಿವಾಸಿ, ಕೂಲಿ ಕಾರ್ಮಿಕ ದುರ್ಗಾ ದೇವು ಹರಿಕಾಂತ್ರ (54) ಬಂಧಿತ ಆರೋಪಿ. ಘಟನೆಯ ಹಿನ್ನೆಲೆ: ಅಖಿಲ ಭಾರತ ಹುಲಿ ಗಣತಿ ಹಿನ್ನೆಲೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಆದೇಶದಂತೆ, ಮೇ 1, 2026 ರಂದು ಹೊಸಕಂಬಿ ವಲಯದ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 'ಕಡಿಬ್ಯಾಕ್'…
ಅಂಕೋಲಾ: 2012ರಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನೋರ್ವನನ್ನು ಬಂಧಿಸುವಲ್ಲಿ ಅಂಕೋಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ತೋಟದಗಲ್ಲಿಯ ನಿವಾಸಿ ರಫೀಕ್ ಅಹ್ಮದ್ ಮೆಹಬೂಬ ಸುಬಾನಿ ಕಮಟಗಿ ಬಂಧಿತ ಆರೋಪಿ. ಈತನನ್ನು ಜುಲೈ 10, 2026ರಂದು ಅಂಕೋಲಾದ ಬಾಳೆಗುಳಿ ಬಳಿ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಹಿನ್ನೆಲೆ: ದಿನಾಂಕ 28-11-2012ರಂದು ಆರೋಪಿ ರಫೀಕ್ ಅಹ್ಮದ್ ತನ್ನ ಲಾರಿಯನ್ನು (KA-25/B-59) ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗುತ್ತಿದ್ದ.…
ಅಂಕೋಲಾ: ತಹಶೀಲ್ದಾರ್ ಕಛೇರಿಯಲ್ಲಿ ವಿಕಲಚೇತನರ ಓಡಾಟಕ್ಕೆ ನಿರ್ಮಿಸಲಾದ ಮಾರ್ಗವು ಗಿಡಗಂಟಿಗಳಿಂದ ಆವೃತವಾಗಿ ಸಂಚಾರಕ್ಕೆ ಅಡ್ಡಿಯಾಗಿರುವ ಕುರಿತು ಹಿರಿಯ ವಕೀಲರಾದ ಉಮೇಶ ಎನ್. ನಾಯ್ಕ ಅವರು ಇತ್ತೀಚೆಗಷ್ಟೇ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಈ ಬಗ್ಗೆ ವಿಕಾಸವಾಹಿನಿ ಯಲ್ಲಿ ವರದಿಯು ಪ್ರಸಾರವಾಗಿತ್ತು. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದರು. ಈ ವರದಿಗೆ ಆಡಳಿತ ಯಂತ್ರವು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ವಿಕಲಚೇತನರ ಮಾರ್ಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವ ಮೂಲಕ ಜನಪರ ಕಾಳಜಿ ತೋರಿದೆ. ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದರೂ, ನಿರ್ವಹಣೆಯ ಕೊರತೆಯಿಂದಾಗಿ ವ್ಹೀಲ್ ಚೇರ್ ಓಡಾಟಕ್ಕೆ…
ಉತ್ತರ ಕನ್ನಡ: ರಾಜ್ಯದ ಗ್ರಾಮ ಪಂಚಾಯಿತಿಗಳು ಪ್ರಸ್ತುತ ತೀವ್ರ ಹಣಕಾಸಿನ, ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರ ಕೂಡಲೇ ಎಚ್ಚೆತ್ತು ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ, ರಾಜ್ಯದ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಅನಿವಾರ್ಯವಾಗಿ ಬೀದಿಗಿಳಿದು ಹೋರಾಟ ಮಾಡಲಿದ್ದಾರೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಗಿರೀಶ್ ಎನ್. ನಾಯಕ ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳ ಪ್ರಮುಖ ಆರ್ಥಿಕ ಮೂಲವಾಗಿರುವ 2025–26 ಹಾಗೂ 2026–27ನೇ ಸಾಲಿನ 15ನೇ ಹಣಕಾಸು ಯೋಜನೆಯ ಅನುದಾನ ಇದುವರೆಗೂ ಬಿಡುಗಡೆಯಾಗಿಲ್ಲ. ಇದರಿಂದಾಗಿ…
ಅಂಕೋಲಾ ತಹಶೀಲ್ದಾರ್ ಕಛೇರಿಯು ಲಿಫ್ಟ್ ಸೌಲಭ್ಯವುಳ್ಳ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡವಾಗಿದ್ದರೂ, ಅಲ್ಲಿ ವಿಕಲಚೇತನರಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂಬುದು ಬೇಸರದ ಸಂಗತಿ. ಕಛೇರಿಯ ಸಿಬ್ಬಂದಿ ವರ್ಗದವರು ತಮ್ಮ ಓಡಾಟಕ್ಕೆ ಲಿಫ್ಟ್ ಬಳಸುತ್ತಿದ್ದರೂ, ವಿಕಲಚೇತನರ ವ್ಹೀಲ್ ಚೇರ್ ಓಡಾಟಕ್ಕೆ ಅನುಕೂಲವಾಗಬೇಕಿದ್ದ ಮಾರ್ಗವನ್ನು ಸೂಕ್ತವಾಗಿ ನಿರ್ವಹಣೆ ಮಾಡದಿರುವುದು ಆಡಳಿತ ಯಂತ್ರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅಂಕೋಲಾದ ಹಿರಿಯ ವಕೀಲರಾದ ಉಮೇಶ ಎನ್. ನಾಯ್ಕ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ವಿಕಲಚೇತನರ ಸುಗಮ ಪ್ರವೇಶಕ್ಕಾಗಿ ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸಿಮೆಂಟ್ ರಸ್ತೆಯು ಗಿಡಗಂಟಿಗಳಿಂದ ಆವೃತವಾಗಿ ಸಂಚಾರಕ್ಕೆ ಯೋಗ್ಯವಾಗಿಲ್ಲ.…
ಅಂಕೋಲಾ: ಪಟ್ಟಣದ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಅಂಕೋಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 8ರಂದು ನಡೆದ ಕಾರ್ಯಾಚರಣೆಯಲ್ಲಿ ಶಿರಸಿಯ ಅರೇಕೊಪ್ಪ ನಿವಾಸಿ ಖಾಲಿದ ತಂದೆ ಶರೀಫ್ ಸಾಬ್ ಕನವಳ್ಳಿ (33) ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ 35,000 ರೂ. ಮೌಲ್ಯದ ಕದ್ದ ಬಾಬ್ತು ಎಕ್ಷಿವ ಕಂಪನಿ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂಕೋಲಾದ ಕಾಕರಮಠದ ಜೈಹಿಂದ್ ಹೋಟೆಲ್ ಹಿಂದುಗಡೆ ನಿವಾಸಿಯಾಗಿರುವ ಪೈರೋಜ್ ತಂದೆ ಸತ್ತಾರ ಖಾನ (58) ಎಂಬುವವರು ಜೂನ್ 26ರಂದು ಬೆಳಿಗ್ಗೆ 07:10 ರಿಂದ 07:25ರ ಸುಮಾರಿಗೆ…
ಸಮಾಜಮುಖಿ ಚಿಂತಕರು, ದಲಿತ ಮುಖಂಡರು ಹಾಗೂ ಅಂಕೋಲಾ ಪುರಸಭೆಯ ಮಾಜಿ ಸದಸ್ಯರಾದ ಅಶೋಕ್ ಶೇಡಗೇರಿ ಅವರು ನಿನ್ನೆ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಸದಾ ಸತ್ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದ ಇವರು, ಓರ್ವ ಆದರ್ಶ ರಾಜಕಾರಣಿ ಯಾಗಿದ್ದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕೆಂಬ ಮಹದಾಸೆ ಹೊಂದಿದ್ದ ಅವರು, ದಲಿತ ಹಾಗೂ ಶೋಷಿತ ವರ್ಗದ ಆಶಾಕಿರಣವಾಗಿ ಗುರುತಿಸಿಕೊಂಡಿದ್ದರು. ಪುರಸಭಾ ಸದಸ್ಯರಾಗಿದ್ದ ಅವಧಿಯಲ್ಲಿ ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಸಕರ ಅವಿರತ ಪ್ರಯತ್ನ ಹಾಗೂ ಸಂತಾಪ: ಅಶೋಕ ಶೇಡಗೇರಿ…
ಅಂಕೋಲಾ ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಆರಂಭವಾದ ಗಾಳಿ-ಮಳೆಯ ಆರ್ಭಟ ಈಗಲೂ ಬಿಡುವಿಲ್ಲದೆ ಮುಂದುವರೆದಿದ್ದು, ಜನಜೀವನ ತೀವ್ರವಾಗಿ ಬಾಧಿತಗೊಂಡಿದೆ. ನಿರಂತರವಾಗಿ ಬೀಸುತ್ತಿರುವ ಗಾಳಿ ಹಾಗೂ ಧಾರಾಕಾರ ಮಳೆಯಿಂದಾಗಿ ತಾಲೂಕಿನ ಹಲವೆಡೆ ಬೃಹತ್ ಮರಗಳು ಧರೆಗುರುಳಿದ್ದು, ಅನೇಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಪ್ರಕೃತಿಯ ಈ ನಿರಂತರ ಮುನಿಸಿನಿಂದ ವಿದ್ಯುತ್ ಸಂಪರ್ಕಕ್ಕೆ ತೀವ್ರ ಅಡ್ಡಿಯಾಗಿದ್ದರೂ, ಈ ವಿಪತ್ತಿನ ಸಮಯದಲ್ಲಿ ಹೆಸ್ಕಾಂ ಅಧಿಕಾರಿಗಳು ಹಾಗೂ ಲೈನ್ಮನ್ಗಳು ತೋರುತ್ತಿರುವ ಕರ್ತವ್ಯನಿಷ್ಠೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಸವಾಲಿನ ನಡುವೆಯೂ ಅವಿರತ ಶ್ರಮ: ಮಳೆಗಾಳಿ ಈಗಲೂ ಮುಂದುವರೆದಿದ್ದರೂ, ಹವಾಮಾನದ ವೈಪರೀತ್ಯವನ್ನು ಲೆಕ್ಕಿಸದೆ…
ಹೊನ್ನಾವರ ತಾಲೂಕಿನ ಕರ್ವಾ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಿವಂಗತ ಗೋಪಾಲ್ ನಾಯ್ಕ್ ಅವರ ಅಕಾಲಿಕ ನಿಧನವು ಪಂಚಾಯತ್ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ನೋವು ಕುಟುಂಬದವರಿಗೆ ಮಾತ್ರವಲ್ಲದೆ, ಅವರೊಂದಿಗೆ ಕೆಲಸ ಮಾಡಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೂ ತೀವ್ರ ದುಃಖವನ್ನುಂಟು ಮಾಡಿದ್ದ ಈ ಹಿನ್ನೆಲೆಯಲ್ಲಿ ದಿವಂಗತ ಗೋಪಾಲ್ ನಾಯ್ಕ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಮತ್ತು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಇಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗ್ರಾಮ ಪಂಚಾಯತಿ…
ಅಂಕೋಲಾ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಆಸ್ತಿಪಾಸ್ತಿಗಳಿಗೆ ಹಾನಿಯಾದ ಘಟನೆಗಳು ವರದಿಯಾಗುತ್ತಿವೆ. ತಾಲೂಕಿನ ಶೇಡಗೇರಿ ಗ್ರಾಮದ ಹುಲಿದೇವರವಾಡದಲ್ಲಿ ವರುಣನ ಆರ್ಭಟಕ್ಕೆ ಮನೆಯೊಂದರ ಚಾವಣಿ ಹಾಗೂ ಗೋಡೆಗಳಿಗೆ ಹಾನಿಯಾಗಿದೆ. ಹುಲಿದೇವರವಾಡ-ಶೇಡಗೇರಿ ನಿವಾಸಿ ತಾಹಿರಾಬಿ ಅಬ್ದುಲ್ ಮುನಾಪ ಶೇಖ್ (ಮನೆ ನಂಬರ್: 921/A) ಅವರ ಮನೆಗೆ ಜುಲೈ 5ರಂದು ಸುರಿದ ವಿಪರೀತ ಗಾಳಿ - ಮಳೆಯ ಪರಿಣಾಮವಾಗಿ ಈ ಹಾನಿ ಸಂಭವಿಸಿದೆ. ಗಾಳಿ ಮಳೆಯ ರಭಸಕ್ಕೆ ಮನೆಯ ಮಾಡು (ಮೇಲ್ಛಾವಣಿ) ಹಾನಿಗೀಡಾಗಿದ್ದು, ಗೋಡೆಗಳು ಬಿರುಕುಬಿಟ್ಟಿವೆ. ಇದರಿಂದಾಗಿ ಮನೆಯಲ್ಲಿ ವಾಸಿಸುವ ಪರಿಸ್ಥಿತಿ ದುಸ್ತರವಾಗಿದ್ದು,…
ಅಂಕೋಲಾ :ಕೋಟೆವಾಡದ ಮುಕ್ತಿಧಾಮದಲ್ಲಿ ಇತ್ತೀಚೆಗೆ ನಡೆದ ಇಂಟರ್ಲಾಕ್ ಅಳವಡಿಕೆ ಕಾಮಗಾರಿ ಬಗ್ಗೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ…
ಅಂಕೋಲಾ (ಉತ್ತರ ಕನ್ನಡ): ತಾಲೂಕಿನ ಅವರ್ಸಾ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಖಾಸಗಿ ಬಸ್ಸೊಂದು ದಿಢೀರ್…
ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮ ಪಂಚಾಯತ್ ಸಮೀಪ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ…
ಅಂಕೋಲಾ ತಾಲೂಕಿನ ರೈತರಿಗೆ 2026ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಮರುರಚಿಸಲಾದ ಬೆಳೆವಿಮೆ ಯೋಜನೆಯಡಿ…
ಸಮಾಜದಲ್ಲಿ ಜೀವ ರಕ್ಷಕರಾಗಿ ಹಗಲಿರುಳು ಶ್ರಮಿಸುವ ವೈದ್ಯರ ಸೇವೆ ಅನನ್ಯವಾದದ್ದು. "ವೈದ್ಯೋ ನಾರಾಯಣೋ ಹರಿ" ಎಂಬ…
ಪ್ರಕೃತಿಯ ಮುನಿಸಿಗೆ ಎಂತಹ ಬಲಿಷ್ಠ ಜೀವವೂ ತಲೆಬಾಗಲೇಬೇಕು ಎಂಬುದಕ್ಕೆ ಅಂಕೋಲಾ ತಾಲೂಕಿನ ಪುರಲಕ್ಕಿ ಬೇಣದ ಆನಂದಗಿರಿ…
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪ್ರೇಯಸಿಗೆ…
ಅಂಕೋಲಾ: ತಾಲೂಕಿನ ಕೇಣಿ ಗ್ರಾಮದ ಗಾಬೀತವಾಡದ ಯುವತಿಯೊಬ್ಬಳು ಮನೆಯಿಂದ ಯಾರಿಗೂ ಏನನ್ನೂ ಹೇಳದೆ ಹೊರಟು, ದಿಢೀರ್…
ಅಂಕೋಲಾ: ತಾಲೂಕಿನ ಕುಂಟಕಣಿ ಗ್ರಾಮದ ಅಸಳ್ಳಿ ಮೂಲದ 18 ವರ್ಷದ ಯುವತಿ ಯೋರ್ವಳು ತಾಯಿಗೆ ಔಷಧಿ…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Sign in to your account