Hot News
- Quick Links
- ಸ್ಥಳೀಯ ಸುದ್ದಿ
ಅಂಕೋಲಾ ತಾಲೂಕಿನ ಶೆಟಗೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಗೊಂಡ ಯುವಕನನ್ನು ತಾಲೂಕಿನ ಬೆಳಂಬಾರ ಗ್ರಾಮದ ಮುಡ್ರಾಣಿ ನಿವಾಸಿ ರಾಘವೇಂದ್ರ ಗೌಡ ಎಂದು ಗುರುತಿಸಲಾಗಿದೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಗಳ ಪ್ರಕಾರ, ಇಂದು ಸಂಜೆ ರಾಘವೇಂದ್ರ ಅವರು ಚಲಾಯಿಸುತ್ತಿದ್ದ ಬೈಕ್ ಆಕಸ್ಮಿಕವಾಗಿ ನಿಯಂತ್ರಣ ಕಳೆದುಕೊಂಡು ಶೆಟಗೇರಿ ಕ್ರಾಸ್ ಬಳಿ ರಸ್ತೆಯಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಯುವಕನಿಗೆ ಗಂಭೀರ ಸ್ವರೂಪದ…
ಕಾರವಾರದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಪಕ್ಕದಲ್ಲಿ ನಡುಹಗಲಿನಲ್ಲಿಯೇ ಗಾಂಜಾ ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ 36 ವರ್ಷದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 11, 2026 ರಂದು ಮಧ್ಯಾಹ್ನ 12:00 ಗಂಟೆಯ ಸುಮಾರಿಗೆ ಹೆದ್ದಾರಿ-66 ರ ಸರ್ವಿಸ್ ರಸ್ತೆಯ ಬಳಿ ಈ ಘಟನೆ ನಡೆದಿದ್ದು, ವ್ಯಾಪಾರ ವೃತ್ತಿ ಮಾಡುತ್ತಿದ್ದ ಮನ್ಸೂರ್ ಶೇಖ್ ಅಬ್ದುಲ್ ಖಾಲಿದ್ ಎಂಬಾತನೇ ಸಿಕ್ಕಿಬಿದ್ದ ಆರೋಪಿಯಾಗಿದ್ದಾನೆ. ಗಾಂಜಾ ಮತ್ತಿನಲ್ಲಿ ಸಿಕ್ಕಿಬಿದ್ದ ಯುವಕನನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಾಧಿಕಾರಿಗಳು ನೀಡಿದ ವರದಿಯಲ್ಲಿ ಆತನ ದೇಹದಲ್ಲಿ 'ಟೆಟ್ರಾಹೈಡ್ರೋಕ್ಯಾನಬಿನಾಲ್'…
ಅಂಕೋಲಾ: ಅಂಕೋಲಾ ತಾಲೂಕಿನ ಕೇಣಿಯ ಗಾಬೀತವಾಡದಲ್ಲಿ 67 ವರ್ಷದ ವೃದ್ಧೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು ಸೀತಾಬಾಯಿ ಬೀರಾ ಹರಿಕಂತ್ರ ಎಂದು ಗುರುತಿಸಲಾಗಿದೆ. ಇವರಿಗೆ ವಯಸ್ಸಾಗಿದ್ದರಿಂದ ಸರಿಯಾಗಿ ಕಣ್ಣು ಕಾಣಿಸುತ್ತಿರಲಿಲ್ಲ ಮತ್ತು ಅವರು ಹೆಚ್ಚಾಗಿ ಮನೆಯಲ್ಲಿಯೇ ಇರುತ್ತಿದ್ದರು. ಮಾರ್ಚ್ 09, 2026 ರಂದು ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ಇವರು, ಮರುದಿನ ಮಾರ್ಚ್ 10 ರ ಬೆಳಗಿನ ಜಾವ 03:00 ರಿಂದ 03:30 ರ ಸುಮಾರಿಗೆ ಮನೆಯಿಂದ ಎದ್ದು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಕಾಣೆಯಾದ ತಾಯಿಗಾಗಿ ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಸುಳಿವು…
ಅಂಕೋಲಾ (ಮಾ. 11): ಸಾಮಾನ್ಯ ಜನರು ದಿನನಿತ್ಯ ಬಳಸುವ ಅಡುಗೆ ಅನಿಲದ (ಎಲ್ಪಿಜಿ) ದರವನ್ನು ದಿಢೀರ್ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಅಂಕೋಲಾದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಾಗೂ ಅಂಕೋಲಾ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ರಸ್ತೆಗಿಳಿದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇಂದು ಅಂಕೋಲಾ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ ಕಾರ್ಯಕರ್ತರು, ಕೇಂದ್ರ ಸರ್ಕಾರದ ನಡೆಯ ಆಕ್ರೋಶ ಹೊರ ಹಾಕಿದರು. ಪ್ರತಿಭಟನಾಕಾರರ ಪ್ರಮುಖ ಆರೋಪಗಳೇನು? "ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ಜನಸಾಮಾನ್ಯರು…
ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಯುವಕರನ್ನೇ ಗುರಿಯಾಗಿಸಿಕೊಂಡು ಹರಡುತ್ತಿದ್ದ ಮಾದಕ ಜಾಲವೊಂದನ್ನು ಕುಮಟಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ, ಮೂರೂರು ಗುಡ್ಡದ ಕಾಗಾಲ ಮಾನೀರ ಬಳಿ ಮಂಗಳವಾರ (ಮಾ. 10) ಮಧ್ಯಾಹ್ನ 1:05 ರ ಸುಮಾರಿಗೆ ದಾಳಿ ನಡೆಸಿ, ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 3 ಕೆ.ಜಿ. ಗಾಂಜಾ, ಗಾಂಜಾ ಮಾರಾಟಕ್ಕೆ ಬಳಸುತ್ತಿದ್ದ 1 ಲಕ್ಷ ರೂ. ಮೌಲ್ಯದ ಸ್ಕೂಟರ್ ಹಾಗೂ 2 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಗಾಂಜಾ ಸಾಗಾಟ ಮತ್ತು ಮಾರಾಟ…
ಅಂಕೋಲಾದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಚಿನಲ್ಲಿ ಕಸ ಸಂಗ್ರಹವಾಗಿದ್ದು ಹಾಗೂ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ವಿಕಾಸ ವಾಹಿನಿ ವರದಿ ಮಾಡಿದ್ದಕ್ಕೆ ಸ್ಪಂದನೆ ವ್ಯಕ್ತವಾಗಿದೆ. ವರದಿ ಪ್ರಸಾರವಾದ ಕೇವಲ 24 ಗಂಟೆಗಳೊಳಗೆ ಸ್ವಚ್ಛತಾ ಕಾರ್ಯ ಆರಂಭವಾಗಿದ್ದು, ಸ್ಥಳೀಯ ಆಡಳಿತ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐ.ಆರ್.ಬಿ ಕಂಪನಿ ಸುರಕ್ಷತಾ ಮುಚ್ಚಳ ಇಲ್ಲದೆ ಬಿಟ್ಟಿದ್ದ ಕಾಂಕ್ರೀಟ್ ಚರಂಡಿಗಳು ಹಾಗೂ ಅಲ್ಲಲ್ಲಿ ಜಮೆಯಾಗಿದ್ದ ಪ್ಲಾಸ್ಟಿಕ್ ಮತ್ತು ಇತರ ಘನತ್ಯಾಜ್ಯಗಳ ಬಗ್ಗೆ ವಿಕಾಸ ವಾಹಿನಿ ವರದಿ ಮಾಡಿತ್ತು. ಈ ವರದಿಯ ನಂತರ…
ಕಾರವಾರ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರ ಬಿಣಗಾ ಮಾರ್ಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಹೆದ್ದಾರಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರ ನೋಂದಣಿಯ (MH 15 KG 4891) ಕಾರಿಗೆ ಭಾರಿ ಗಾತ್ರದ ಕಂಟೈನರ್ವೊಂದು ದಿಢೀರನೆ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ಕಳೆದುಕೊಂಡ ಕಂಟೈನರ್, ನೇರವಾಗಿ ಕಾರಿನ ಮೇಲೆಯೇ ಉರುಳಿ ಬಿದ್ದಿದೆ. ಬೃಹತ್ ವಾಹನದ ಭಾರಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಕಾರಿನೊಳಗಿದ್ದ ಎಂಟು ವರ್ಷದ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆಗೆ…
ಅಂಕೋಲಾದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುಣಮಟ್ಟ ಹಾಗೂ ಸಾರ್ವಜನಿಕ ಸುರಕ್ಷತೆಯ ಬಗ್ಗೆ ಈಗ ಗಂಭೀರ ಪ್ರಶ್ನೆಗಳು ಎದ್ದಿವೆ. ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತಿರುವ ಐ.ಆರ್.ಬಿ ಕಂಪನಿಯು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಬಿಟ್ಟುಹೋಗಿರುವ ಅಪಾಯಕಾರಿ ಕುರುಹುಗಳು ವಾಹನ ಸವಾರರಲ್ಲಿ ತೀವ್ರ ಆತಂಕ ಮೂಡಿಸಿವೆ. ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಈ ಕಾಮಗಾರಿಯ ಪಕ್ಕದಲ್ಲೇ ಸಾರ್ವಜನಿಕರ ಜೀವಕ್ಕೆ ಕಂಟಕವಾಗುವಂತಹ ಗಂಭೀರ ಲೋಪವೊಂದು ಕಣ್ಣಿಗೆ ಬೀಳುತ್ತಿದೆ. ಅಧಿಕಾರಿಗಳ ಈ ಬೇಜವಾಬ್ದಾರಿತನದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಅಸಮಾದಾನ ವ್ಯಕ್ತವಾಗುತ್ತಿದೆ. ಹೆದ್ದಾರಿ ಬದಿಯ ಈ ಕಸದ ನಿರ್ವಹಣೆ…
ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ನವಚೈತನ್ಯ ನಾಮಧಾರಿ ಸಂಘದ 13ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ (ಮಾ. 7) ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡವು. ಗಮನ ಸೆಳೆದ ಶಾಸಕರ ಸರಳತೆ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಕೃಷ್ಣ ಸೈಲ್ ಅವರು ತಮ್ಮ ದೈನಂದಿನ ಹಾಗೂ ರಾಜಕೀಯದ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ, ಬೆಂಗಳೂರಿನಿಂದ ನೇರವಾಗಿ ಶಿರೂರು ಗ್ರಾಮದ ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಶಾಸಕರ ಆಗಮನವು ಸಂಘಟನೆಯ ಸದಸ್ಯರು ಹಾಗೂ ಗ್ರಾಮಸ್ಥರಲ್ಲಿ ಅತೀವ ಸಂತಸ…
ಅಂಕೋಲಾ: ತಾಲೂಕಿನ ಶಿರೂರು ಗ್ರಾಮದಲ್ಲಿ ನಿನ್ನೆ ಸಂಜೆ ಭಾರೀ ಗಾತ್ರದ ಮಾವಿನ ಮರವೊಂದು ದಿಢೀರ್ ಧರೆಗುರುಳಿದ ಪರಿಣಾಮ ಮಹಿಳೆಯೊಬ್ಬರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮರದ ಅಡಿಗೆ ಸಿಲುಕಿ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಕೂದಲೆಳೆ ಅಂತರದಲ್ಲಿ ಪಾರಾದ ಜೀವ ಗ್ರಾಮದ ಬೀರ ಪಟಿಯಾ ಗೌಡ ಎಂಬುವವರ ಮನೆಯ ಆವರಣದಲ್ಲಿದ್ದ ಈ ಮರವು ಅನಿರೀಕ್ಷಿತವಾಗಿ ಉರುಳಿ ಬಿದ್ದಿದೆ. ಘಟನೆಯ ಸಮಯದಲ್ಲಿ ಅಲ್ಲೇ ಇದ್ದ ಮಹಿಳೆಯೊಬ್ಬರ ಮೇಲೆ ಮರದ ಕೊಂಬೆಗಳು ಬೀಳುವಷ್ಟರಲ್ಲಿ…
ಕುಣಿಗಲ್ ಸುದ್ದಿ :- ತಾವರೆಕೆರೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಜೇಶ್ ನನ್ನು ಕೆಲಸದಿಂದ ವಜಾ…
ನೆಲಮಂಗಲ: ಕರ್ನಾಟಕದ ಶಾಲಾ ಶಿಕ್ಷಣದಲ್ಲಿ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿ ಹಾಗೂ ಮುಂಬರುವ 2026ರ ಮಾರ್ಚ್…
ಅಂಕೋಲಾ: ಸಿನಿಮಾ ಶೈಲಿಯಲ್ಲಿ ಬ್ಯಾಂಕೊಂದರ ಸ್ಟ್ರಾಂಗ್ ರೂಮ್ ಗೋಡೆ ಕೊರೆದು ಕಳ್ಳತನಕ್ಕೆ ಯತ್ನಿಸಿದ್ದಲ್ಲದೇ, ತಾಲೂಕಿನಾದ್ಯಂತ ಕೈಚಳಕ…
ಅಂಕೋಲಾ: ತಾಲೂಕಿನ ಅಭಿವೃದ್ಧಿಗೊಂಡ ರಸ್ತೆಗಳ ಪೈಕಿ ಪ್ರಮುಖವಾದ ಪೂಜಗೇರಿ ರಸ್ತೆಯಲ್ಲಿರುವ ಹಳೆಯ ಕಿರಿದಾದ ಸೇತುವೆ ಇದೀಗ…
ನಾಡಿನ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಯ ಸಂಭ್ರಮದ ನಡುವೆಯೇ, ಭಕ್ತರ ಭಕ್ತಿ ಹಾಗೂ ನಂಬಿಕೆಯನ್ನು…
ಅಂಕೋಲಾ: ಹದಿಮೂರು ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ವಿವಾಹಿತೆಯೊಬ್ಬಳು ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ…
ಹಣ ಹಾಗೂ ಒಡವೆಗಳಿಗಾಗಿ ವೃದ್ಧೆಯೊಬ್ಬರ ಮನೆಯ ಮಾಡು ಒಡೆದು ಒಳನುಗ್ಗಿ, ಕತ್ತು ಹಿಸುಕಿ ಬರ್ಬರವಾಗಿ ಕೊಲೆ…
ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆ ರಸ್ತೆಯಲ್ಲಿ (ಛತ್ರಕೂರ್ವೆ ಗ್ರಾಮಕ್ಕೆ ತೆರಳುವ ಮಾರ್ಗ) ಅಕ್ರಮವಾಗಿ ಗೇಟ್…
ಅಂಕೋಲಾ: ತಾಲೂಕಿನ ಸುಂಕಸಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಮುಂಜಾನೆ ಹೊತ್ತಿಗೆ ಎರಡು ಖಾಸಗಿ ಬಸ್ಗಳು…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Temporibus autem quibusdam et aut officiis debitis aut rerum necessitatibus saepe eveniet ut et voluptates repudiandae.
Sign in to your account