Hot News
- Quick Links
- ಸ್ಥಳೀಯ ಸುದ್ದಿ
ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್ ಒಂದರ ಕಚೇರಿಯ ಕಿಟಕಿ ಸರಳು ಕತ್ತರಿಸಿ, ನಗದು ದೋಚಿದ್ದ ಪ್ರಕರಣವನ್ನು ಭೇದಿಸುವಲ್ಲಿ ಕುಮಟಾ ಪೊಲೀಸರು ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಮಟಾ ತಾಲೂಕಿನ ವನ್ನಳ್ಳಿ ಕಲ್ಗುಡ್ಡೆಯ ನಿವಾಸಿ ಅಸ್ಲಂ ತಂದೆ ಮಹಮ್ಮದ್ ಹನೀಫ ದಂಡು (18 ವರ್ಷ) ಎಂದು ಗುರುತಿಸಲಾಗಿದ್ದು, ಈತನೊಂದಿಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು (17 ವರ್ಷ) ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನೆಲೆ: ದಿನಾಂಕ ಫೆಬ್ರವರಿ 1 ರ ರಾತ್ರಿ…
ಅಂಕೋಲಾ (ಅಲಗೇರಿ): ಸಿದ್ದಾಪುರದ ಶ್ರೀ ಮನ್ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಭಾನುವಾರ (ಫೆ. 08) ಇಲ್ಲಿನ ಶ್ರೀ ಸಣ್ಣಮ್ಮ ದೇವಸ್ಥಾನದ ಆವರಣದಲ್ಲಿ ಬೃಹತ್ ಹಿಂದೂ ಸಮ್ಮೇಳನ ಜರುಗಿತು. ಸುಮಾರು 800ಕ್ಕೂ ಅಧಿಕ ಜನರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಅಲಗೇರಿಯ ಶ್ರೀ ಈಶ್ವರ ದೇವಸ್ಥಾನದಿಂದ ಸಭಾ ಸ್ಥಳವಾದ ಶ್ರೀ ಸಣ್ಣಮ್ಮ ದೇವಸ್ಥಾನದವರೆಗೆ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಶೋಭಾಯಾತ್ರೆಯು ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಧರ್ಮ ಜಾಗೃತಿ ಮತ್ತು ಆಶೀರ್ವಚನ: ಸಮ್ಮೇಳನದ ಸಾನ್ನಿಧ್ಯ ವಹಿಸಿದ್ದ…
ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಾಲಿಂಗ್ ಕುನ್ನೂರು (33) ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದು, ದಕ್ಷ ಅಧಿಕಾರಿಯ ಅಕಾಲಿಕ ಅಗಲಿಕೆ ಪೊಲೀಸ್ ವಲಯ ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕ ತಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯಲ್ಲಾಲಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಸತತ ಪ್ರಯತ್ನ ನಡೆಸಿದರೂ ಚಿಕಿತ್ಸೆ ಫಲಕಾರಿಯಾಗದೇ, ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಜನಾನುರಾಗಿ ಅಧಿಕಾರಿ: ಯಲ್ಲಾಲಿಂಗ್ ಕುನ್ನೂರು ಅವರು ಮುಂಡಗೋಡ ಠಾಣೆಗೆ ಎರಡನೇ ಬಾರಿಗೆ ಪಿಎಸ್ಐ ಆಗಿ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದರು.…
ಅಂಕೋಲಾ: ಅಂಕೋಲಾ ಪಟ್ಟಣದ ಹೃದಯಭಾಗದಲ್ಲಿರುವ ಜೈಹಿಂದ್ ಮೈದಾನದಲ್ಲಿ ನಿನ್ನೆ ಫೆಬ್ರವರಿ 1ರಂದು ಕನ್ನಡದ ಕಂಪು ಹರಡಿತು. ಕರ್ನಾಟಕ ರಣಧೀರರ ವೇದಿಕೆ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ "ಕರಾವಳಿ ಕನ್ನಡ ಹಬ್ಬ-2026" ಕಾರ್ಯಕ್ರಮವು ಸಾಂಸ್ಕೃತಿಕ ವೈಭವ ಮತ್ತು ಜನಸ್ತೋಮದೊಂದಿಗೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಕಾರ್ಯಕ್ರಮದ ನೇತೃತ್ವವನ್ನು ಕರ್ನಾಟಕ ರಣಧೀರರ ವೇದಿಕೆಯ ಜಿಲ್ಲಾಧ್ಯಕ್ಷರಾದ ಸೂರಜ ಪಾಂಡುರಂಗ ನಾಯ್ಕ ಅವರು ವಹಿಸಿದ್ದರು. ಪರಿಸರ ಕಾಳಜಿಯ ವಿಶಿಷ್ಟ ಉದ್ಘಾಟನೆ: ಸಾಮಾನ್ಯವಾಗಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸುವುದು ವಾಡಿಕೆ. ಆದರೆ, ಈ ಬಾರಿ ಕರಾವಳಿಯ ಬದುಕಿನ…
ಅಂಕೋಲಾ: ಮಂಜುಗುಣಿಯಿಂದ ಗಂಗಾವಳಿ ಕಡೆಗೆ ಸಂಪರ್ಕಿಸುವ ಗಂಗಾವಳಿ ಸೇತುವೆಯ ಸಂಪರ್ಕವಿರುವ ರಸ್ತೆ ತಿರುವು ವಾಹನ ಸಂಚಾರಕ್ಕೆ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಮಂಜುಗುಣಿ ಕಡೆಯಿಂದ ಗಂಗಾವಳಿ ಕಡೆಗೆ ಸಾಗುವಾಗ, ಇಲ್ಲಿನ ಅವೈಜ್ಞಾನಿಕ ತಿರುವಿನಲ್ಲಿ ವಾಹನಗಳ ನಿಯಂತ್ರಣ ತಪ್ಪುವ ಸಾಧ್ಯತೆ ಹೆಚ್ಚಿದೆ. ಪ್ರಸ್ತುತ ಈ ಜಾಗದಲ್ಲಿರುವ ಬ್ಯಾರಿಕೇಡ್ ಚಾಲಕರಿಗೆ ತೀರಾ ಹತ್ತಿರ ಬಂದಾಗಲಷ್ಟೇ ಗೋಚರಿಸುತ್ತಿದ್ದು, ಇಲ್ಲಿನ ಅವೈಜ್ಞಾನಿಕ ತಿರುವಿನಲ್ಲಿ ದಿಡೀರನೆ ಬ್ಯಾರಿಕೇಡ್ ಎದುರಾಗುವುದರಿಂದ ಚಾಲಕರು ಗಲಿಬಿಲಿಗೊಂಡು ವಾಹನ ನಿಯಂತ್ರಿಸಲು ಕಷ್ಟಪಡುವಂತಾಗಿದೆ. ರಸ್ತೆ ಮತ್ತು ತಿರುವಿನ ರಚನೆ ಈ ರೀತಿಯಾಗಿರುವುದರಿಂದ, ಬ್ಯಾರಿಕೇಡ್ ಕೂಡ ಕಾಣದಂತೆ ಇರುವುದು ಅಪಾಯವನ್ನು ಹೆಚ್ಚಿಸಿದೆ.…
ಅಂಕೋಲಾ: ಕನ್ನಡ ನಾಡು-ನುಡಿಯ ಕಂಪನ್ನು ಪಸರಿಸುವ ಮತ್ತು ಸ್ಥಳೀಯ ಕಲಾ ವೈಭವವನ್ನು ಅನಾವರಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಕರ್ನಾಟಕ ರಣಧೀರರ ವೇದಿಕೆಯ ವತಿಯಿಂದ ಇದೇ ಫೆಬ್ರವರಿ 1 ರಂದು ಪಟ್ಟಣದ ಜೈಹಿಂದ್ ಮೈದಾನದಲ್ಲಿ ‘ಕರಾವಳಿ ಕನ್ನಡ ಹಬ್ಬ’ವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಅಂದು ಸಂಜೆ 5 ಗಂಟೆಗೆ ವರ್ಣರಂಜಿತ ನೃತ್ಯ ಸ್ಪರ್ಧೆಯೊಂದಿಗೆ ಆರಂಭವಾಗಲಿದ್ದು, ಸ್ಥಳೀಯ ಪ್ರತಿಭೆಗಳು ಕರಾವಳಿಯ ಜಾನಪದ ಹಾಗೂ ಕನ್ನಡದ ಗೀತೆಗಳಿಗೆ ಹೆಜ್ಜೆ ಹಾಕುವ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಲಿದ್ದಾರೆ. ಸಾಧಕರಿಗೆ ಸನ್ಮಾನ: ಸಂಜೆ 7 ಗಂಟೆಗೆ ನಡೆಯಲಿರುವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ…
ಅಂಕೋಲಾ: ತಾಲೂಕಿನ ಗಡಿಭಾಗದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತದಲ್ಲಿ ಸೋಮವಾರ ಮೋಜಿಗೆಂದು ಬಂದಿದ್ದ ಪ್ರವಾಸಿಗನೊಬ್ಬರು ನೀರಿನ ಆಳಕ್ಕೆ ಸಿಲುಕಿ ಒದ್ದಾಡುತ್ತಿದ್ದಾಗ, ಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ತಮ್ಮ ಸಮಯಪ್ರಜ್ಞೆಯಿಂದ ಅವರನ್ನು ರಕ್ಷಿಸಿದ ಘಟನೆ ನಡೆದಿದೆ. ತಮಿಳುನಾಡು ಮೂಲದ 19 ವರ್ಷದ ಆದಿತ್ಯೆ ಎಂಬುವವರೇ ಪ್ರಾಣಾಪಾಯದಿಂದ ಪಾರಾದ ಯುವಕ. ಇವರು ತಮಿಳುನಾಡಿನಿಂದ ಸುಮಾರು 40 ಜನರ ಪ್ರವಾಸಿಗರ ತಂಡದೊಂದಿಗೆ ಇಲ್ಲಿಗೆ ಆಗಮಿದ್ದರು. ಜಲಪಾತದ ವೀಕ್ಷಣೆ ವೇಳೆ ಉತ್ಸಾಹದಲ್ಲಿ ಸ್ನೇಹಿತರಿಗಿಂತ ಮುಂದೆ ಸಾಗಿದ ಆದಿತ್ಯೆ , ನೀರಿನ ಆಳದ ಅರಿವಿಲ್ಲದೆ ಇಳಿದಿದ್ದು, ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲಾರಂಭಿಸಿದ್ದಾರೆ.…
ಅಂಕೋಲಾ (ಜ24): ವೃತ್ತಿಯಿಂದ ವೈದ್ಯರಾಗಿದ್ದು, ನಂತರ ಕೆಎಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದು ಆಡಳಿತ ಸೇವೆಗೆ ಪ್ರವೇಶಿಸಿದ ಯುವ ಹಾಗೂ ಕಾರ್ಯಕ್ಷಮ ಅಧಿಕಾರಿ ಡಾ. ಚಿಕ್ಕಪ್ಪ ನಾಯಕ ಅವರು, ಬೆಳಗಾವಿಯ ಬೈಲಹೊಂಗಲದಲ್ಲಿ ಗ್ರೇಡ್–2 ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ ಬಳಿಕ 30 ಜೂನ್ 2025ರಂದು ಅಂಕೋಲಾ ತಾಲ್ಲೂಕಿನ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಯಾಗಿ (Executive Magistrate) ಗ್ರೇಡ್–1 ತಹಶೀಲ್ದಾರ್ ಹುದ್ದೆಗೆ ನೇಮಕಗೊಂಡು ಅಧಿಕಾರ ಸ್ವೀಕರಿಸಿದರು. ಹಲವು ವರ್ಷಗಳ ನಂತರ ಅಂಕೋಲಾಕ್ಕೆ ದೊರಕಿದ ಪೂರ್ಣಾವಧಿ ತಹಶೀಲ್ದಾರ್ ಎಂಬ ಕಾರಣಕ್ಕೆ ಅವರ ಆಗಮನವೇ ಸಾರ್ವಜನಿಕರಲ್ಲಿ ಶಿಸ್ತು,…
ಅಂಕೋಲಾ ತಾಲೂಕಿನಲ್ಲಿ ಜನವರಿ 23ರಂದು ನಡೆಯಲಿರುವ ಮೂರನೇ ವರ್ಷದ ಹಿಂದೂ ಉತ್ಸವದ ಪೋಸ್ಟರ್ ಅನ್ನು ದಿನಾಂಕ 21-12-2026ರಂದು ಹಿಂದೂ ಉತ್ಸವ ಸಮಿತಿಯ ವತಿಯಿಂದ ಶಾಂತದುರ್ಗ ದೇವಿಯ ಬಂಡಿಕಟ್ಟೆ ಹತ್ತಿರ ಅನಾವರಣಗೊಳಿಸಲಾಯಿತು. ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ವಿವಿಧ ಜಾತಿಗಳನ್ನು ಪ್ರತಿನಿಧಿಸುವ ಹಿಂದೂ ಸಮಾಜದ ಪ್ರಮುಖರು ಉಪಸ್ಥಿತರಿದ್ದು, ಹಿಂದೂ ಉತ್ಸವಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹಿಂದೂ ಉತ್ಸವ ಸಮಿತಿಯ ಪ್ರಮುಖರಾದ ಸುನಿಲ ನಾಯ್ಕ ಹೊನ್ನಿಕೇರಿ, “ಎಲ್ಲಾ ದೇವರಿಗೆ ನಮಸ್ಕರಿಸುತ್ತಾ ಅಂಕೋಲಾದ ಸಮಸ್ತ ಹಿಂದೂ ಬಾಂಧವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಅಂಕೋಲಾದ ಹಿಂದೂ…
ಅಂಕೋಲಾ :ತಾಲೂಕಿನ ಹಟ್ಟಿಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ ಶ್ರೀ ಮಾತೋಶ್ರೀ ಗಾಯತ್ರಿ ಸೇವಾ ಸಂಸ್ಥೆ ವತಿಯಿಂದ ಪ್ರೊಜೆಕ್ಟರ್ ವ್ಯವಸ್ಥೆಯನ್ನು ಒದಗಿಸಿ ‘ಇ-ಕಲಿಕಾ’ ಕೊಠಡಿಯನ್ನು ಉದ್ಘಾಟಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ರಜತ್ ಭಟ್ ಅವರು ಪ್ರೊಜೆಕ್ಟರ್ ಅನ್ನು ಸ್ಕ್ರೀನ್ ಮೇಲೆ ಚಾಲನೆ ನೀಡುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಮಕ್ಕಳು ಮನೆಗಳಲ್ಲಿ ಮೊಬೈಲ್ ವೀಕ್ಷಣೆ ಮಾಡುವ ಅವಶ್ಯಕತೆ ಇಲ್ಲದೆ, ಶಾಲೆಯಲ್ಲಿಯೇ ಶಿಕ್ಷಕರ ಮಾರ್ಗದರ್ಶನದಲ್ಲಿ ಪ್ರೊಜೆಕ್ಟರ್ ಮೂಲಕ ಪಾಠಗಳನ್ನು ಕಲಿಯಬೇಕು. ಇದರಿಂದ ಕಲಿಕೆ…
ಅಂಕೋಲಾ ಶಹರದಲ್ಲಿ ಮಹಿಳೆ ಹಾಗೂ ಆಕೆಯ ಮೂರು ವರ್ಷದ ಮಗ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು,…
ಅಂಕೋಲಾ: ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ವಾರ್ಡ್ಗಳ ರಸ್ತೆ ಹಾಗೂ ಪ್ರದೇಶಗಳ ಗುರುತಿಗಾಗಿ ಸಾರ್ವಜನಿಕ ಹಣ…
ಅಂಕೋಲಾ ತಾಲೂಕಿನ ಬೇಲೆಕೇರಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ನಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಭಯ…
ಅಂಕೋಲಾ: ಮೂಲತಃ ಸೆಂಟ್ರಿಂಗ್ ಕೆಲಸಗಾರರಾಗಿದ್ದ ಇವರು, ಈ ಕೆಲಸವಿಲ್ಲದ ಸಮಯದಲ್ಲಿ ಜೀವನ ನಿರ್ವಹಣೆಗಾಗಿ ತೆಂಗಿನ ಮರ…
ಅಂಕೋಲ:ಸ್ವಾಮಿ ವಿವೇಕಾನಂದರು ನಮ್ಮ ದೇಶದ ಅಮೂಲ್ಯ ಆಸ್ತಿಯಾಗಿದ್ದು, ದೇಶದ ಯುವಜನರೇ ನಿಜವಾದ ಸಂಪತ್ತು ಎಂದು ಅವರು…
ಅಂಕೋಲಾ: ಬುಧವಾರ ದಿನಾಂಕ 13 ರಂದು ಅಂಕೋಲಾ ರೂರಲ್ ರೋಟರಿ ಕ್ಲಬ್ ವತಿಯಿಂದ ರಕ್ತದಾನ ಶಿಬಿರ…
ಅಂಕೋಲಾ: ಪಡ್ತೀ ಸಮಾಜದ ಕ್ರಿಕೆಟ್ ಟೂರ್ನಮೆಂಟ್ 2026 – ಸೀಸನ್ 1ರ ಉದ್ಘಾಟನಾ ಸಮಾರಂಭವು ಬಾಸಗೋಡದ…
ಅಂಕೋಲಾ : ಮಕ್ಕಳ ಕನಸಿಗೆ ಹಾಗೂ ಪ್ರತಿಭೆಗೆ ನಿಜವಾದ ರೂಪ ಕೊಡುವ ಶಿಲ್ಲಿಗಳೇ ಶಿಕ್ಷಕರು. ಈ…
ಅಂಕೋಲಾ: ಇಲ್ಲಿನ ಮಂಜುಗುಣಿ ಸೇತುವೆ ಬಳಿ ಡಿಸೆಂಬರ್ 31 ರ ರಾತ್ರಿ ಸಂಭವಿಸಿದ ಭೀಕರ ರಸ್ತೆ…
Confirmed
65.10M
Death
6.60M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Quis autem vel eum iure reprehenderit qui in ea voluptate velit esse quam nihil molestiae consequatur, vel illum qui dolorem.
Sign in to your account