Hot News
- Quick Links
- ಸ್ಥಳೀಯ ಸುದ್ದಿ
ಅಂಕೋಲಾ: ತಾಲೂಕಿನ ಹಿಚ್ಕಡ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಾಳೆಕಾಯಿ ತುಂಬಿದ ಮಿನಿ ಪಿಕಪ್ ವಾಹನವೊಂದು ರಸ್ತೆಯ ಮಧ್ಯೆ ಪಲ್ಟಿಯಾದ ಪರಿಣಾಮ, ಅದರ ಹಿಂದೆಯೇ ಬರುತ್ತಿದ್ದ ಕಾರೊಂದು ಅಪಘಾತವನ್ನು ತಪ್ಪಿಸಲು ಹೋಗಿ ಡಿವೈಡರ್ ಏರಿ ಲೈಟ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಘಟನೆ ಜರುಗಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ದೊಡ್ಡ ಮಟ್ಟದ ಪ್ರಾಣಹಾನಿ ಸಂಭವಿಸಿಲ್ಲ. ಅಂಕೋಲಾ ಕಡೆಗೆ ಸಾಗುತ್ತಿದ್ದ ಮಿನಿ ಪಿಕಪ್ ವಾಹನವು ಹಿಚ್ಕಡ ಕ್ರಾಸ್ ಬಳಿ ಬರುತ್ತಿದ್ದಂತೆ ಏಕಾಏಕಿ ವಾಹನದ ನಿಯಂತ್ರಣ ತಪ್ಪಿದ ಪರಿಣಾಮ ವಾಹನವು…
ಕುಮಟಾ ತಾಲೂಕಿನ ಮಿರ್ಜಾನ ಬಳಿಯ ತಾರಿಬಾಗಿಲು ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಹಣ ಪಣಕ್ಕಿಟ್ಟು ಕೋಳಿ ಅಂಕ (ಜುಗಾರಾಟ) ನಡೆಸುತ್ತಿದ್ದ ಅಡ್ಡೆಯ ಮೇಲೆ ಕುಮಟಾ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾನುವಾರ ಸಂಜೆ ನಡೆದ ಈ ಕಾರ್ಯಾಚರಣೆ ವೇಳೆ ಪೊಲೀಸರನ್ನು ಕಂಡ ಜುಗಾರಿಗಳು ಕೋಳಿ, ಚಾಕು ಹಾಗೂ ಹಣವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಓರ್ವ ಆರೋಪಿ ಮಾತ್ರ ಪೊಲೀಸರ ಬಲೆಗೆ ಬಿದ್ದಿದ್ದಾನೆ. ತಮ್ಮ ಅನ್ಯಾಯದ ಲಾಭಗೋಸ್ಕರ ಕೋಳಿ ಹುಂಜಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿ ಈ ಜುಗಾರಾಟವನ್ನು ನಡೆಸಲಾಗುತ್ತಿತ್ತು. ಆಗಸ್ಟ್ 02, 2026…
ಅಂಕೋಲಾ ತಾಲೂಕು ಪಂಚಾಯತ್ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಇ.ಒ) ರಾಮು ಜಿ. ಅಗ್ನಿ ಅವರು ಅಧಿಕೃತವಾಗಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ತಾಲೂಕಿನ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಬದಲಾವಣೆ ಮಹತ್ವ ಪಡೆದುಕೊಂಡಿದ್ದು, ಇದುವರೆಗೆ ಅಂಕೋಲಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ರಾಮು ಗುನಗಿ ಅವರು ನೂತನ ಅಧಿಕಾರಿಗೆ ಕಡತಗಳನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು. ರಾಮು ಜಿ. ಅಗ್ನಿ ಅವರು ಈ ಹಿಂದೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಪಾರ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಸಿಂದಗಿಯಲ್ಲಿ ತಮ್ಮ ಆಡಳಿತದ ಮೂಲಕ…
ಕಾರವಾರ: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕದ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷರಾದ ಅರುಣ್ ಹರ್ಕಡೆ ಅವರ ನೇತೃತ್ವದಲ್ಲಿ ಹಾಗೂ ವಿವಿಧ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಹಯೋಗದೊಂದಿಗೆ ಈ ಪ್ರತಿಭಟನೆ ಜರುಗಿತು. ಕಾವೇರಿ ನಮ್ಮ ಹಕ್ಕು, ರಾಜ್ಯದ ರೈತರ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಬಲಿಕೊಡಬಾರದು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಒಕ್ಕೊರಲಿನಿಂದ ಘೋಷಣೆಗಳನ್ನು ಕೂಗುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಈ ಪ್ರತಿಭಟನಾ…
ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿಯ ಕತ್ತಲು ಆವರಿಸುತ್ತಿದ್ದಂತೆಯೇ ಅಕ್ರಮ ಚಟುವಟಿಕೆಗಳ ಜಾಲವೊಂದು ಸದ್ದಿಲ್ಲದೆ ತನ್ನ ಕಬಂಧಬಾಹುವನ್ನು ಚಾಚುತ್ತಿದೆ. ಲಾರಿ ಚಾಲಕರು ಮತ್ತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಪೂರೈಸುವ ವ್ಯವಸ್ಥಿತ ಜಾಲವೊಂದು ಕಾರ್ಯಾಚರಣೆ ನಡೆಸುತ್ತಿರುವ ಆಘಾತಕಾರಿ ಅಂಶವೊಂದು ಇದೀಗ ಬೆಳಕಿಗೆ ಬಂದಿದೆ. ಅಂಕೋಲಾ ತಾಲೂಕಿನ ಬಾಳೆಗುಳಿ ಫ್ಲೈಓವರ್ ಕೆಳಭಾಗದಲ್ಲಿ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ 1985ರ ಎನ್ಡಿಪಿಎಸ್ (NDPS) ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಾಗಿದೆ. ಜುಲೈ 31, 2026 ರಂದು ರಾತ್ರಿ ಹೆದ್ದಾರಿಯ ವಾಹನ ಸಂಚಾರ…
ಕಾರವಾರ: ಇಲ್ಲಿನ ಭಾರತೀಯ ನೌಕಾಪಡೆಯ ಸೀಬರ್ಡ್ ಕದಂಬ ನೌಕಾನೆಲೆಯ ನೂತನ ಮುಖ್ಯದ್ವಾರದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕವನ್ನು ಅಳವಡಿಸಬೇಕು ಮತ್ತು ರಾಜ್ಯದ ಅಧಿಕೃತ ಭಾಷೆಗೆ ಗೌರವ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು. ಕರವೇ ಜಿಲ್ಲಾಧ್ಯಕ್ಷರಾದ ಅರುಣ ಹರಕಡೆ ಅವರ ನೇತೃತ್ವದ ನಿಯೋಗವು ಈ ಮನವಿ ಪತ್ರವನ್ನು ನೀಡಲಾಯಿತು. ಕರ್ನಾಟಕದ ಹೆಮ್ಮೆಯ ಪ್ರಥಮ ರಾಜವಂಶವಾದ 'ಕದಂಬ' ಹೆಸರನ್ನು ಈ ನೌಕಾನೆಲೆಗೆ ಇಡಲಾಗಿದೆ. ಆದರೆ, ನೂತನ ಮುಖ್ಯದ್ವಾರದ ನಾಮಫಲಕಗಳಲ್ಲಿ…
ಕುಮಟಾ : ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಜನಪ್ರಿಯ ವೈದ್ಯಾಧಿಕಾರಿಗಳಾದ ಡಾ. ಸದಾನಂದ ಪೈರವರನ್ನು ವಯೋ ನಿವೃತ್ತಿಗೊಂಡ ಪ್ರಯುಕ್ತ ಆಯೋಜಿಸಿದ ಬೀಳ್ಕೊಡುಗೆಯ ಸಮಾರಂಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಕುಮಟಾ ತಾಲ್ಲೂಕಾ ಘಟಕದಿಂದ ಆಪ್ತವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಬೋಧಕರ ಸಂಘದ ರಾಜ್ಯಾಧ್ಯಕ್ಷರಾದ ಅಧ್ಯಾಪಕ ಮಂಜುನಾಥ ಗಾಂವಕರ್ ಬರ್ಗಿಯವರು, ಸದಾನಂದ ಪೈರವರು ತಮ್ಮ ಸಜ್ಜನಿಕೆಯ ಜನಮುಖಿ ಸೇವೆಯ ಮೂಲಕ ಕುಮಟಾ ಮರೆಯಲಾಗದ ಅಪರೂಪದ ವೈದ್ಯರಾಗಿ ಚರಿತ್ರೆಯನ್ನು ಸಲ್ಲಿಸಿರುವ ಕುರಿತು ಅವರನ್ನು ಅಭಿನಂದಿಸಿ, ಆಲೇಖ ಪತ್ರವನ್ನು ಸಮರ್ಪಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ವೈದ್ಯಾಧಿಕಾರಿ ಡಾ.…
ಇಂದು ಉತ್ತರ ಕನ್ನಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾ ಪಂಚಾಯತ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿ ಮಾಡಿ, ಗ್ರಾಮ ಪಂಚಾಯಿತಿಗಳ ಆಡಳಿತ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ವಿಶೇಷವಾಗಿ ವಿಬಿಜಿ ಆರ್.ಎಂ.ಜಿ (VBG-RMG) ಯೋಜನೆಯ ಅನುಷ್ಠಾನದಲ್ಲಿ ಎದುರಾಗುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳು, ಗ್ರಾಮ ಪಂಚಾಯಿತಿಗಳಿಗೆ ಅನುದಾನದ ಕೊರತೆಯಿಂದ ಉಂಟಾಗಿರುವ ಅಭಿವೃದ್ಧಿ ಕಾರ್ಯಗಳ ಅಡಚಣೆಗಳು, ಹಾಗೂ ಇ-ಸ್ವತ್ತು (e-Swathu) ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವಿವರವಾಗಿ ಗಮನ ಸೆಳೆಯಲಾಯಿತು. ಮಾನ್ಯ…
ಅಂಕೋಲಾ ತಾಲೂಕಿನ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಛೇರಿಯು ಹಳೆಯ ಪುರಸಭಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ಈ ಕಟ್ಟಡವು ಸೋರುತ್ತಿದ್ದು, ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ಆಗಾಗ್ಗೆ ವಿದ್ಯುತ್ ಕಡಿತಗೊಳ್ಳುವುದರಿಂದ ಕತ್ತಲೆಯಲ್ಲಿ ಕೆಲಸಕಾರ್ಯಗಳಿಗೆ ಪರದಾಡುವಂತಾಗಿದೆ. ಅಲ್ಲದೆ, ಕಛೇರಿಯನ್ನು ತಲುಪಲು ಸುಮಾರು 26 ಮೆಟ್ಟಿಲುಗಳನ್ನು ಹತ್ತಬೇಕಾಗಿರುವುದರಿಂದ ವಿಕಲಚೇತನರು ಹಾಗೂ ವಯೋವೃದ್ಧರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಜೊತೆಗೆ ಕಛೇರಿಗೆ ಮೇಲಾಧಿಕಾರಿಗಳು ಬೆಳಿಗ್ಗೆ 11 ಗಂಟೆಯ ನಂತರವೇ ಆಗಮಿಸುವುದರಿಂದ, ಕಛೇರಿ ಕೆಲಸಕ್ಕಾಗಿ ಬರುವ ಸಾರ್ವಜನಿಕರು ಕಾದು ಸುಸ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಿದ್ದಾರೆ. ಸಾರ್ವಜನಿಕರ…
ಅಂಕೋಲಾ: ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಎತ್ತಿತೋರಿಸುವ ಜೊತೆಗೆ ಉತ್ತಮ ಕೆಲಸಗಳನ್ನು ಬೆಳಕಿಗೆ ತಂದು ಪ್ರೋತ್ಸಾಹ ನೀಡುವ ಪತ್ರಿಕೆಗಳು ಸಮಾಜದ ಕಣ್ಣುಗಳಿದ್ದಂತೆ ಪ್ರತಿದಿನ ಹಲವಾರು ಸವಾಲುಗಳನ್ನು ಎದುರಿಸಿ ವರದಿಗಳನ್ನು ಮಾಡುವ ಪತ್ರಕರ್ತರ ಕೆಲಸ ಸುಲಭವಲ್ಲ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಗಿರೀಶ ನಾಯಕ ಹೇಳಿದರು. ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಇವರ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪತ್ರಿಕಾ ವರದಿಗಳು ಸಮಾಜದಲ್ಲಿ ಅಸಹಾಯಕರಿಗೆ ಸಹಾಯ ಹಸ್ತ…
30 Sep 2024, 09:44 am, 2329 reads ಅಂಕೋಲಾ : ಒಂದು ವಾರದ ಹಿಂದೆ ಶಿರಸಿಯ ಬಿಜೆಪಿಯ…
ಕಾರವಾರ: ಅಪರಾಧ ಕೃತ್ಯಗಳ ತ್ವರಿತ, ನಿಖರ ಹಾಗೂ ವೈಜ್ಞಾನಿಕ ತನಿಖೆಗೆ ನೆರವಾಗುವ ನಿಟ್ಟಿನಲ್ಲಿ ಉತ್ತರ ಕನ್ನಡ…
ಅಂಕೋಲಾ ತಾಲೂಕಿನ 7 ವರ್ಷದ ಬಾಲಕಿ ಐಶಾನಿ ಸಂತೋಷ್ ನಾಯ್ಕ್ ಎಳೆಯ ವಯಸ್ಸಿನಲ್ಲಿಯೇ "ಭರತನಾಟ್ಯ ಕಲಾ…
ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನದ ಸರ ಸುಲಿಗೆ ಪ್ರಕರಣವನ್ನು…
ಅಂಕೋಲಾ ತಾಲೂಕಿನ ಕನಸೆಗದ್ದೆ ನಿವಾಸಿ ಹಾಗೂ ಸಕ್ರಿಯ ಸಮಾಜ ಸೇವಾ ಕಾರ್ಯಕರ್ತರಾದ ಶ್ರೀ ವಿಜಯ್ ಕುಮಾರ್…
ಹೊನ್ನಾವರ: ತಾಲೂಕಿನ ಕಾಸರಕೋಡು ಟೊಂಕದ ಬಂದರಿನಲ್ಲಿ ಲಂಗರು ಹಾಕಿದ್ದ ಪರ್ಸಿನ್ ಬೋಟ್ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ…
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿದೇವರವಾಡಾ ಶೇಡಗೇರಿಯಲ್ಲಿ ಜುಲೈ 19, 2026…
ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಅಧಿಕಾರಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಮುಂದುವರಿದಿರುವುದರಿಂದ ಹಾಗೂ…
ಹೊನ್ನಾವರ ತಾಲೂಕಿನ ಕರ್ವ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Temporibus autem quibusdam et aut officiis debitis aut rerum necessitatibus saepe eveniet ut et voluptates repudiandae.
Sign in to your account