Connect with us

ರಾಜ್ಯ

ಹೇಮಾವತಿ ಎಡದಂಡೆ ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

Sed ut perspiciatis unde omnis iste natus error sit voluptatem accusantium doloremque laudantium, totam rem aperiam.

Published

on

ಅದು ಸಾವಿರಾರು ರೈತರ ಜೀವನಾಡಿಯಾಗಿರುವ ನಾಲೆ‌. ನೀರು ಫೋಲಾಗುವುದನ್ನು ತಡೆಯಲು ಎಂದೇ ನಾಲೆ ಆಧುನೀಕರಣ ಮಾಡಲಾಗಿತ್ತು. ಕಾಮಗಾರಿ ಮುಗಿದ ಮೂರೇ ವರ್ಷಕ್ಕೆ ಕಾಂಕ್ರೀಟ್ ಕಿತ್ತು ಬಂದಿದ್ದು, ನೂರಾರು ಕೋಟಿ ರೂಪಾಯಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಅಷ್ಟಕ್ಕೂ ಆ ನಾಲೆ ಯಾವುದು? ಕಾಂಕ್ರೀಟ್ ಕಿತ್ತು ಬರ್ತಿರೋದಕ್ಕೆ ಕಾರಣ ಏನು ಅಂತಿರಾ? ಈ ಸ್ಟೋರಿ ನೋಡಿ.

ಮಂಡ್ಯ, (ಫೆಬ್ರವರಿ 21): ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಜೀವನಾಡಿ ಅಂದಾಕ್ಷಣ ತಟ್ಟನೆ ನೆನಪಾಗುವುದು ಕೆಆರ್​​ಎಸ್ ಡ್ಯಾಂ. ಆದ್ರೆ ಜಿಲ್ಲೆಯ ಏಳು ತಾಲ್ಲೂಕುಗಳ ಪೈಕಿ ಐದು ತಾಲ್ಲೂಕುಗಳು ಮಾತ್ರ ಕೆ.ಆರ್.ಎಸ್ ಅಚ್ಚುಕಟ್ಟು ವ್ಯಾಪ್ತಿಗೆ ಬಂದ್ರೆ ಉಳಿದ ಕೆ.ಆರ್.ಪೇಟೆ ಹಾಗೂ ನಾಗಮಂಗಲ ತಾಲ್ಲೂಕುಗಳಿಗೆ ಹಾಸನದ ಹೇಮಾವತಿ ಜಲಾಶಯವೇ ಆಸರೆ. ಈ ಎರಡು ತಾಲ್ಲೂಕುಗಳಿಗೆ ನೀರು ಪೂರೈಸುವ ಹೇಮಾವತಿ ಎಡದಂಡೆ ನಾಲೆ ಆಧುನೀಕರಣದ ಹೆಸರಲ್ಲಿ ನೂರಾರು ಕೋಟಿ ಲೂಟಿ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ.

ಅಂದಹಾಗೆ ಈ ನಾಲೆಯನ್ನ ಆಧುನೀಕರಣ ಮಾಡಬೇಕು ಎಂಬುದು ರೈತರ ಬಹಳ ವರ್ಷಗಳ ಬೇಡಿಕೆಯಾಗಿತ್ತು. ಆ ಹಿನ್ನಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ 140 ಕೀಮಿ ನಾಲೆ ಅಭಿವೃದ್ದಿಗೆ ಮುಂದಾಗಿತ್ತು. ಅದಕ್ಕಾಗಿ 883 ಕೋಟಿ ರೂ. ಯೋಜನೆಯನ್ನ ಸಿದ್ದಪಡಿಸಿ, ಏಜೆನ್ಸಿಯೊಂದಕ್ಕೆ ಕಾಮಗಾರಿಯ ಗುತ್ತಿಗೆ ನೀಡಿತ್ತು. 2021ರಲ್ಲಿ ಆಧುನೀಕರಣ ಕಾಮಗಾರಿ ಮುಗಿದಿದೆ ಎಂದು ಹಣ ಬಿಡುಗಡೆ ಮಾಡಲಾಗಿದೆ. ಅದ್ರೆ ಕಾಮಗಾರಿ ಮುಗಿದ ಮೂರೇ ವರ್ಷಕ್ಕೆ ಕಾಂಕ್ರೀಟ್ ಕಿತ್ತು ಬರುತ್ತಿದೆ. ಹೀಗಾಗಿ ಇದು ಸಂಪೂರ್ಣವಾಗಿ ಕಳಪೆಯಿಂದ ಕೂಡಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಅಲ್ಲದೆ ಕೆ.ಆರ್.ಪೇಟೆ ತಾಲ್ಲೂಕಿನ ಪಿ.ಬಿ.ಮಂಚನಹಳ್ಳಿ ಗ್ರಾಮದ ಬಳಿ ಎಸ್ಕೇಪ್ ಗೇಟ್ ಬದಲಾವಣೆ ಮಾಡದಿದ್ರೂ ಗುತ್ತಿಗೆ ಪಡೆದ ಸಂಸ್ಥೆಗೆ ಹಣ ಮಂಜೂರಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ. ಜೊತೆಗೆ ನಾಲೆಗೆ ರಕ್ಷಣ ಕಲ್ಲುಗಳನ್ನ ನಿರ್ಮಾಣ ಮಾಡಿದ್ದೇವೆ ಎಂದು ನಾಲ್ಕು ಕೋಟಿ ರೂ. ಹಣವನ್ನು ಸಹ ಅಬೇಸ್ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಭ್ರಷ್ಟ ಅಧಿಕಾರಿಗಳನ್ನ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಇನ್ನು ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೂ ರೈತರು ದೂರು ನೀಡಿದ್ದು, ತನಿಖೆ ನಡೆಸುವಂತೆ ನೀರಾವರಿ ಇಲಾಖೆಯ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿಗಳು ಪತ್ರ ಬರೆದಿದ್ದಾರಂತೆ.

ಒಟ್ಟಿನಲ್ಲಿ ಹತ್ತಾರು ವರ್ಷಗಳ ಬೇಡಿಕೆ ಈಡೇರಿತು ಎನ್ನುವ ಸಂಭ್ರಮದಲ್ಲಿದ್ದ ರೈತರಿಗೆ ಕಳಪೆ ಕಾಮಗಾರಿ ಶಾಕ್ ತಂದೊಡ್ಡಿದೆ. ನೂರಾರು ಕೋಟಿ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದ್ದು, ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗುತ್ತಾ ಕಾದುನೋಡಬೇಕಿದೆ.

ರಾಜ್ಯ

ಪೊಲೀಸರು ತಮ್ಮ ಸ್ವಂತ ವಾಹನಕ್ಕೆ “ಪೊಲೀಸ್” ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ..

Published

on

ಪೊಲೀಸರು ತಮ್ಮ ಖಾಸಗಿ ವಾಹನಗಳಿಗೆ “ಪೋಲಿಸ್” ಎಂದು ಬರೆಸಿಕೊಂಡು ನಾಮಫಲಕದ ದುರುಪಯೋಗವಾಗುತ್ತಿರುವ ಕುರಿತು ಮಾನ್ಯ ವಿಧಾನಸಭೆಯ ಸದಸ್ಯರಾದ ಶ್ರೀ ಬಾಲಕೃಷ್ಣ ಸಿಎನ್ ಶ್ರವಣಬೆಳಗೊಳ ರವರು ಕರ್ನಾಟಕ ವಿಧಾನಸಭೆಯಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 561 ರಲ್ಲಿ ಈ ಕೆಳಕಂಡ ಪ್ರಶ್ನೆಗೆ ಉತ್ತರವನ್ನು ಸರ್ಕಾರದಿಂದ ಕೋರಿದ್ದಾರೆ.

ಅ) ರಾಜ್ಯದ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೋಲಿಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ?

ಆ) ಹಾಗಿದ್ದಲ್ಲಿ. ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ ಇವರ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು?

ಸದರಿ ಪ್ರಶ್ನೆಗೆ ಕರ್ನಾಟಕದ ಗೃಹ ಮಂತ್ರಿಗಳು ನೀಡಿದ ಉತ್ತರವು ಈ ಕೆಳಗಿನಂತಿದೆ.

ಅ) ರಾಜ್ಯದ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಆ ) ಸರ್ಕಾರದ ಸುತ್ತೋಲೆ ಸಂಖ್ಯೆ :ಟಿಡಿ 126 ಟಿಡಿಓ 2022. ದಿನಾಂಕ 19-05-2022 ರ ಅನ್ವಯ ಇಂಥ ಉಲ್ಲಂಘನೆ ಮಾಡಿರುವ ಪೊಲೀಸ ಅಧಿಕಾರಿ ಮತ್ತು ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗಿರುತ್ತದೆ… ಎಂದು ಡಾ. ಜಿ ಪರಮೇಶ್ವರ್ ಗೃಹ ಸಚಿವರು ದಿನಾಂಕ 11-03-2025 ರಂದು ಕರ್ನಾಟಕ ವಿಧಾನಸಭೆಯಲ್ಲಿ ಶ್ರೀ ಬಾಲಕೃಷ್ಣ ಸಿಎನ್ ಸದಸ್ಯರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈ ಮೂಲಕ ಸರ್ಕಾರದ ಪೋಲಿಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಇಡೀ ಕುಟುಂಬದ ಸದಸ್ಯರು ಸಹ ತಾವು ಸಹ ಅಧಿಕಾರಿಗಳಾಗಿರುವಂತೆ ತಮ್ಮ ಪರಿವಾರದವರು ವಾಹನಗಳ ಮೇಲೆ ಪೋಲಿಸ್ ಎಂಬ ಸ್ಟಿಕ್ಕರ್ ಅಂಟಿಸಿ ಕೊಂಡು ಓಡಾಡುವದು ಮತ್ತು ಅವರ ಹಳೇಯ ವಾಹನ ಖರೀದಿ ಕೊಂಡ ಬೇರೆಯವರು ಆ ಹಳೇಯ ಸ್ಟಿಕ್ಕರ್ ತೆಗೆಯದೇ ಹಾಗೆಯೇ ಓಡಾಡುವುದಕ್ಕೆ ಕಡಿವಾಣ ಬಿದ್ದಂತಾಗಿದೆ.

….

Continue Reading

ರಾಜ್ಯ

ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ಹುಚ್ಚುನಾಯಿ, ಸಿಕ್ಕಸಿಕ್ಕವರ ಮೇಲೆ ದಾಳಿ

Nulla pariatur. Excepteur sint occaecat cupidatat non proident, sunt in culpa qui officia deserunt mollit anim id est laborum.

Published

on

ಚಿಕ್ಕಬಳ್ಳಾಪುರದ ಪೆರೇಸಂದ್ರ ಗ್ರಾಮದಲ್ಲಿ ಹುಚ್ಚು ನಾಯಿಯೊಂದು 10ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿರುವಂತಹ ಘಟನೆ ನಡೆದಿದೆ. ಮಕ್ಕಳು, ವೃದ್ಧರು ಸೇರಿದಂತೆ ಅನೇಕರು ಗಾಯಗೊಂಡಿದ್ದಾರೆ. ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಗಾಯಾಳುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತಿ ಹುಚ್ಚು ನಾಯಿಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ.

ಚಿಕ್ಕಬಳ್ಳಾಪುರ, ಫೆಬ್ರವರಿ 21: ಆ ಗ್ರಾಮದಲ್ಲಿ ಮೊದಲೇ ನಾಯಿಗಳ (dog) ಹಾವಳಿ ಹೆಚ್ಚು. ನಾಯಿಗಳ ಹಿಂಡು ಕಂಡು ಮಕ್ಕಳು, ಮಹಿಳೆಯರು ಹೊರಬರುವುದೇ ಕಷ್ಟ. ಇಂತಹದ್ದರಲ್ಲಿ ಸಾಕಿದ ನಾಯಿಯೊಂದು ಹುಚ್ಚು ನಾಯಿಯಂತಾಗಿದ್ದು, ಸಿಕ್ಕಸಿಕ್ಕವರ ಮೇಲೆ ಎರಗಿ ಕಚ್ಚಿ ಗಾಯಗೊಳಿಸಿದರೆ, ಇನ್ನೊಂದಡೆ ಸಕಾಲಕ್ಕೆ ಚಿಕಿತ್ಸೆ ನೀಡಲು ವೈದ್ಯರು ಇರಲೇ ಇಲ್ಲವೆಂದು ಗಾಯಾಳುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಚ್ಚು ನಾಯಿ ಕಾಟ: ವೈದ್ಯರ ವಿರುದ್ದ ಆಕ್ರೋಶ

ಕೈ, ಕಾಲು, ಮುಖ, ಮೂತಿ, ಮಕ್ಕಳು, ವೃದ್ದರು, ಮಹಿಳೆಯರು ಎನ್ನದೇ ವಿಕೃತವಾಗಿ ಹುಚ್ಚು ನಾಯಿಯೊಂದು ಸಿಕ್ಕಸಿಕ್ಕವರನ್ನು ಗಾಯಗೊಳಿಸಿರುವುದು ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿ. ಗ್ರಾಮದ ಮಹಿಳೆಯೊಬ್ಬರು ನಾಯಿಗಳನ್ನು ಸಾಕಿಕೊಂಡಿದ್ದರು. ಅದರಲ್ಲಿ ಒಂದು ನಾಯಿಗೆ ಹುಚ್ಚು ಹಿಡಿದಿದ್ದು, ಕಳೆದ 2 ದಿನಗಳಿಂದ ಕಣ್ಣಿಗೆ ಕಾಣಿಸಿದವರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದೆ. ಇನ್ನು ಗಾಯಾಳುಗಳು ಪೆರೇಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋದರೆ ಅಲ್ಲಿ ವೈದ್ಯರಿಲ್ಲದ ಕಾರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಸಿಲಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಮನೆಯೊಳಗೆ ಬರುತ್ತಿವೆ ವಿಷಕಾರಿ ಹಾವುಗಳು

ಇನ್ನು ಕಳೆದ 2 ದಿನಗಳಿಂದ ಪೆರೇಸಂದ್ರ ಗ್ರಾಮದ 5 ವರ್ಷದ ಚಂದುಶ್ರೀ, 2 ವರ್ಷದ ಮಿತುನ್, 39 ವರ್ಷದ ರಾಮು, 45 ವರ್ಷದ ರಾಮಚಂದ್ರ ಗಂಭೀರ ಗಾಯಗೊಂಡಿದ್ದರೆ, ಇತ್ತ ಇಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಸರ್ಕಾರಿ ಮೆಡಿಕಲ್ ಕಾಲೇಜಿಗೆ ನುಗ್ಗಿದ ನಾಯಿ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ ಜೊಯಬ್, ಸಿಬ್ಬಂದಿ ನಾಗಮಣಿ, ರಬ್ಸಲ್ ಎನ್ನುವವರಿಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ಗಾಯಾಳು ಚಂದುಶ್ರೀ ತಾಯಿ ಉಮಾ ಅವರು ಕಾಲೇಜಿನಲ್ಲಿ ನಾಯಿಗೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ: ಕರ್ನಾಟಕದಲ್ಲಿ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ

ಹುಚ್ಚು ನಾಯಿ ಹಾವಳಿಯಿಂದ ಬೆಚ್ಚಿಬಿದ್ದ ಪೆರೇಸಂದ್ರ ಗ್ರಾಮಪಂಚಾಯ್ತಿ ಅಧಿಕಾರಿಗಳು, ಹುಚ್ಚುನಾಯಿ ಹಿಡಿಯುವ ಆಪರೇಷನ್ ಆರಂಭಿಸಿದ್ದಾರೆ. ಆದರೆ ಹುಚ್ಚುನಾಯಿ ಮಾತ್ರ ಕಣ್ಣಿಗೆ ಕಾಣಿಸದೇ ಮರೆಮಾಚಿಕೊಂಡಿದೆ. ಆದರೂ ಸಿಕ್ಕಸಿಕ್ಕ ನಾಯಿಗಳನ್ನು ಹಿಡಿವು ಆಸ್ತ್ರಾ ಸಂಸ್ಥೆಯ ಸಿಬ್ಬಂದಿಗಳು ವ್ಯಾಕ್ಸಿನೇಷನ್ ಆರಂಭಿಸಿದ್ದಾರೆ. ಮತ್ತೊಂದಡೆ ಎಲ್ಲಿ ಮತ್ತೆ ನಾಯಿ ದಾಳಿ ಮಾಡುತ್ತದೋ ಎಂದು ಜನರು ಭಯಭೀತರಾಗಿದ್ದಾರೆ.

Continue Reading

ರಾಜ್ಯ

ಗುಡ್​ನ್ಯೂಸ್: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Sed ut perspiciatis unde omnis iste natus error sit voluptatem accusantium doloremque laudantium, totam rem aperiam.

Published

on

ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದು ಗೃಹಲಕ್ಷ್ಮಿಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದರು. ಕಳೆದ ಮೂರು ತಿಂಗಳಿನಿಂದ ಹಣ ಹಾಕಿಲ್ಲ ಎನ್ನುವ ಆರೋಪಗ ಕೇಳಿಬಂದಿದ್ದು, ಈ ಕುರಿತು ಕೂಡ ನಿರಂತರ ವರದಿ ಮಾಡಿತ್ತು. ಗೃಹಲಕ್ಷ್ಮಿಯರ ಅಳಲು ಸರ್ಕಾರದ ಗಮನ ತರುವ ಕೆಲಸ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಹಾಕುವ ಭರವಸೆ ನೀಡಿದ್ದಾರೆ.

ಬೆಂಗಳೂರು, (ಫೆಬ್ರವರಿ 21) : ಹೌದು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲ ಆಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದರೆ, ಇನ್ನೂ ಕೆಲವರು ಸಮಾಜಕ್ಕೂ ಅನುಕೂಲ ಮಾಡಿ ಮಾದರಿಯಾಗಿದ್ದಾರೆ. ಆದ್ರೇ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಮೂರು ಕಂತಿನ ಹಣ ಬಾರದೇ ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಟಿವಿ9 ವರದಿಯ ನಿರಂತರ ಅಭಿಯಾನದಿಂದ ಇದೀಗ ಗೃಹಲಕ್ಷ್ಮಿಯರಿಗೆ ಹಣ ಸಿಗುವ ಭರವಸೆ ಕೂಡ ಸಿಕ್ಕಿದೆ. ಹೌದು.. ಟಿವಿ9 ವರದಿ ಬೆನ್ನಲ್ಲೇ ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಟಿವಿ9 ಜೊತೆಗೆ ಮಾತನಾಡಿ, ನಾನು ಆಸ್ಪತ್ರೆಯಲ್ಲಿರುವ ಕಾರಣ ಮೂರು ತಿಂಗಳು ವಿಳಂಬವಾಗಿದೆ. ನಾನಿದ್ದಾಗ ಫೈನಾನ್ಸ್ ಇಲಾಖೆಗೆ ನಾನು ಒತ್ತಡ ಹಾಕುತ್ತಿದ್ದೆ. ಜೊತೆಗೆ ಮುಖ್ಯಮಂತ್ರಿ ಗಮನಕ್ಕೆ ತರುತ್ತಿದ್ದೆ. ದುರ್ದೈವ ಅಪಘಾತ ಬಳಿಕ ನಲವತ್ತು ದಿನ ಆಸ್ಪತ್ರೆಯಲ್ಲಿದ್ದ ಕಾರಣ ತಡವಾಗಿದೆ, ಇಷ್ಟು ದಿನ ಇಲಾಖೆಯಿಂದ ಹಣ ಬಿಡುಗಡೆ ಮಾಡ್ತಿದ್ದೇವು. ಈಗ ಬೆಂಗಳೂರು ಸುತ್ತಮುತ್ತಲಿನ ನಾಲ್ಕು ತಾಲೂಕು ಪಂಚಾಯತಿಗೆ ದುಡ್ಡು ಹಾಕಿ, ಅಲ್ಲಿಂದ ಸಿಡಿಪಿಒ ಮುಖಾಂತರ ಸೇಮ್ ಚಾನಲ್ ಹಣ ಬಿಡುಗಡೆ ಮಾಡಲು ಹೆಚ್ಚು ಕಮ್ಮಿ ಆಗಿದೆ . ಇನ್ನೊಂದು ವಾರ ಹತ್ತು ದಿನದಲ್ಲಿ ಖಾತೆಗಳಿಗೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿ ಹಣವನ್ನು ತಾಲೂಕು ಪಂಚಾಯಿತಿ ವತಿಯಿಂದ ಬಿಡುಗಡೆ ಮಾಡುತ್ತೇವೆ. ಇನ್ನೊಂದು ವಾರ ಹತ್ತು ದಿನದಲ್ಲಿ ದುಡ್ಡು ಬರುತ್ತೆ. ಎರಡು ತಿಂಗಳ ಹಣ ಫೈನಾನ್ಸ್ ದವರು ಟ್ರಸರಿಗೆ ಹಾಕಿದ್ದಾರೆ ಎನ್ನುವ ಮಾಹಿತಿ ಇದೆ. ನಾನು ಕೂಡ ಬಜೆಟ್ ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಈ ಬಗ್ಗೆ ಚರ್ಚೆ ಮಾಡಿ ಮೂರು ತಿಂಗಳ ದುಡ್ಡನ್ನ ಹಾಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಅನ್ನಭಾಗ್ಯದ ಹಣವೂ ಇಲ್ಲ, ಗೃಹಲಕ್ಷ್ಮೀ ದುಡ್ಡು ಕೊಟ್ಟಿಲ್ಲ: ಭುಗಿಲೆದ್ದ ಆಕ್ರೋಶ

ಹೊಸ ಪ್ಯಾಟರ್ನ್ ಮಾಡಿದ್ದರಿಂದಲೂ ಹಣ ಬರಲು ವಿಳಂಬವಾಗಿದೆ. ಆದ್ರೆ ಹೊಸ ಪ್ಯಾಟರ್ನ್ ದಿಂದ ಯಾವುದೇ ಗೊಂದಲ ಇಲ್ಲ. ಡೈರೆಕ್ಟ್ ಅವರ ಅಕೌಂಟ್ ಗೆ ಹಣ ಹಾಕುತ್ತೇವೆ. ಎಲ್ಲಾ ಗೃಹಲಕ್ಷ್ಮಿಯರಿಗೆ ನಿಮ್ಮ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇನ್ನೂ ಹೆಬ್ಬಾಳ್ಕರ್ ಅವರ ಮಾತಿನಿಂದ ಬಹುತೇಕ ಗೃಹಲಕ್ಷ್ಮಿಯರು ಖುಷಿ ಯಾಗಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಟಿವಿ9ಗೆ ಧನ್ಯವಾದ ಹೇಳಿದ್ದಾರೆ.

ಒಟ್ಟಿನಲ್ಲಿ ಮೂರು ತಿಂಗಳ ಕಂತಿನ ಹಣ ಬಂದಿಲ್ಲ ಎಂದು ಕಂಗಾಲಾಗಿದ್ದ ಗೃಹಲಕ್ಷ್ಮಿಯರು ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭರವಸೆಯಿಂದ ಮೂರು ತಿಂಗಳ ಆರು ಸಾವಿರ ರೂಪಾಯಿ ಒಂದೇ ಸಮಯಕ್ಕೆ ಬರುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಕೊಟ್ಟ ಮಾತಿನಂತೆ ಸಚಿವರು ಹಣ ಹಾಕಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

Continue Reading
Advertisement

Trending