ತಾವರೆಕೆರೆ ಗ್ರಾ.ಪಂ ಬಿಲ್ ಕಲೆಕ್ಟರ್ ನನ್ನು ಕೆಲಸದಿಂದ ವಜಾ ಗೋಳಿಸುವಂತೆ ತಾ.ಪಂ ಕಚೇರಿಯ ಮುಂದೆ ಧರಣಿ.!

News Desk
1 Min Read

ಕುಣಿಗಲ್‌ ಸುದ್ದಿ :- ತಾವರೆಕೆರೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಜೇಶ್ ನನ್ನು ಕೆಲಸದಿಂದ ವಜಾ ಗೋಳಿಸುವಂತೆ ಒತ್ತಾಯಿಸಿ ತಾ.ಪಂ ಕಚೇರಿಯ ಮುಂದೆ ಇಂದಿನಿಂದ ಧರಣಿ ನಡೆಸಲಾಗಿದೆ.

ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಹುದ್ದೆಯನ್ನು ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ನೇಮಕಾತಿ ಪಡೆದು ಹಾಗೂ ಕಂದಾಯ ಹಣವನ್ನು ಅಕ್ರಮವಾಗಿ ದುರುಪಯೋಗ ಮಾಡಿಕೊಂಡಿರುವ ರಾಜೇಶ್ ಹೆಚ್.ಎಸ್ ಎಂಬುವವರನ್ನು ಬಿಲ್ ಕಲೆಕ್ಟರ್ ಹುದ್ದೆಯಿಂದ ವಜಾಗೊಳಿಸುವಂತೆ ಆತನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕಳೆದ ನಾಲ್ಕು ತಿಂಗಳ ಹಿಂದೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ. ಹಾಗೂ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ನ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು ,ಆದರೆ ಇದುವರೆಗೂ ಯಾವುದೆ ಕ್ರಮ ಕೈಗೊಳ್ಳದ ಕಾರಣ ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯತ ಕಚೇರಿಯ ಮುಂಭಾಗ ನ್ಯಾಯಕ್ಕಾಗಿ ಆಗ್ರಹಿಸಿ ಸೋಮವಾರ ದೂರುದಾರರಾದ ಕಾಂತರಾಜು ಹಾಗೂ ಇವರ ಸಂಗಡಿಗರು ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸುತ್ತಿದ್ದಾರೆ.

ತಾವರೆಕೆರೆ ಗ್ರಾಮ ಪಂಚಾಯ್ತಿಯಲ್ಲಿ ಬಿಲ್ ಕಲೆಕ್ಟರ್ ಹಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೇಶ್ ಎಂಬುವವರನ್ನು ಕೆಲಸದಿಂದ ವಜಾ ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸದೆ ರಕ್ಷಣೆ ಮಾಡುತ್ತಿರುವ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಯ ವಿರುದ್ಧ ಅನಿರ್ದಿಷ್ಟ ಅವಧಿ ಅಹೊರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಹೋರಾಟಗಾರಾದ ದೇವರಾಜು ಹೆಚ್ ಎಸ್ ಹಾಗೂ ಕಾಂತರಾಜು ಜೊತೆ ಇವರ ಸಂಗಡಿಗರು ತಿಳಿಸಿದ್ದು, ಸದರಿ ಹೋರಾಟದಲ್ಲಿ ಶ್ರೀನಿವಾಸ್.ಕಾಂತರಾಜು. ದೇವರಾಜು.ನಂದೀಶ್ ಲೋಕೇಶ್.ಹೆಚ್.ಎಸ್ ನಂದಿಶ್ ಪುಟ್ಟಸ್ವಾಮಿ , ರಮೇಶ್ ಉಪಸ್ಥಿತರಿದ್ದರು.

Share This Article
Leave a Comment